July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನ ಕೊಯ್ಯೂರು ಇದರ ವಾರ್ಷಿಕ ‌ಜಾತ್ರಾ ಮಹೋತ್ಸವದಂದು ಅರಂತೊಟ್ಟು ಕಟ್ಟೆಪೂಜೆಯನ್ನು ನೆರವೇರಿಸಲಾಯಿತು.

ಮೂಲಗುಂಡದಿಂದ‌ ಭಂಡಾರದ ಆಗಮನದ ಸಂದರ್ಭ ಸಂದೇಶ್ ಮದ್ದಡ್ಕ ಇವರ ನೇತೃತ್ವದಲ್ಲಿ ಸುಮಾರು 10 ಭಜನಾ ತಂಡಗಳಿಂದ ಭಜನಾ ‌ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ದೀಕ್ಷಿತ್ ಅರಂತೊಟ್ಟು ಇವರ ಡಿಲೈಟ್ ಡೆಕೋರೇಷನ್ಸ್ (Delight Decorations) ನ್ನು ದ್ವಾರಕಾ ಡ್ರೈವಿಂಗ್ ಸ್ಕೂಲ್ ‌ಮಾಲಕರಾದ ಯಶವಂತ ಆರ್ ಬಾಳಿಗಾ ಉದ್ಘಾಟಿಸಿದರು.

ಈ ವೇಳೆ ಅರಂತೊಟ್ಟು ‌ಕುಟುಂಬಸ್ಥರ ವತಿಯಿಂದ ‌ಬೆಳ್ತಂಗಡಿ‌ ತಾಲೂಕಿನ ‌ಹೆಸರಾಂತ ಸ್ನೇಕ್‌‌ಮಾಸ್ಟರ್ ಅಶೋಕ್‌‌ಕುಮಾರ್ ಲಾಯಿಲ ಹಾಗೂ ಚಂದ್ರಶೇಖರ ‌ಗೌಡ ಮಾವಿನಕಟ್ಟೆ ಇವರಿಗೆ ಸನ್ಮಾನವನ್ನು ಯಶವಂತ ಬಾಳಿಗಾ ಹಾಗೂ ಪ್ರವೀಣ್ ಗೌಡ ನೆರವೇರಿಸಿದರು.

ಈ‌‌ ಸಂದರ್ಭದಲ್ಲಿ ಹಿತೇಶ್ ಬಳ್ಳಾಲ್ ಕೊಯ್ಯೂರು ಗುತ್ತು, ತೃಪ್ತ ಜೈನ್‌ ಉಣಿಲೆ ಗುತ್ತು, ಯಶವಂತ ಬಾಳಿಗಾ ಬೆಳ್ತಂಗಡಿ, ಪ್ರವೀಣ್ ಗೌಡ ಮಾವಿನಕಟ್ಟೆ ಹಾಗೂ ಅರಂತೊಟ್ಟು ‌ಕುಟುಂಬಸ್ಥರು ಮತ್ತು ಭಕ್ತಾದಿಗಳು ಊರ ಪರವೂರ‌ ಗಣ್ಯರು ಉಪಸ್ಥಿತರಿದ್ದರು.

Related posts

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಜು.16ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya
error: Content is protected !!