25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯಲ್ಲಿ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಕಾರ್ಯಕ್ರಮ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ದೀಪ ಪ್ರಧಾನ ಕಾರ್ಯಕ್ರಮವು ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಖಜಾಂಚಿಯವರಾದ ಅಚ್ಯುತ ನಾಯಕ್ ಉದ್ಘಾಟಿಸಿ, ‘ಸಂಸ್ಕಾರವು ನಿತ್ಯ ಜೀವನದ ಅಂಗವಾಗಬೇಕು ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಸಂಸ್ಕಾರವನ್ನು ಚಿಕ್ಕಂದಿನಿಂದಲೇ ಮೈಗೂಡಿಸಿಕೊಳ್ಳಬೇಕು’ ಎಂದರು.


ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಂದ್ರಮತಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು 9ನೇ ತರಗತಿಯ ವಿದ್ಯಾರ್ಥಿಗಳಿಗೆ ದೀಪವನ್ನು ಹಸ್ತಾಂತರಿಸಿದರು.
ವಿದ್ಯಾರ್ಥಿಗಳಾದ ಶ್ರೀನಂದ ಸ್ವಾಗತಿಸಿ, ಸಾತ್ವಿ ಕಾರ್ಯಕ್ರಮವನ್ನು ನಿರೂಪಿಸಿ, ಸ್ಪಂದನ ಹೆಚ್ ಧನ್ಯವಾದಗೈದರು.

Related posts

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಸುಲ್ಕೇರಿ ನಾಯಿದಗುರಿ ಅಂಗನವಾಡಿ ಕೇಂದ್ರಕ್ಕೆ ಚಪ್ಪಲ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya
error: Content is protected !!