July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನ ಕೊಯ್ಯೂರು ಇದರ ವಾರ್ಷಿಕ ‌ಜಾತ್ರಾ ಮಹೋತ್ಸವದಂದು ಅರಂತೊಟ್ಟು ಕಟ್ಟೆಪೂಜೆಯನ್ನು ನೆರವೇರಿಸಲಾಯಿತು.

ಮೂಲಗುಂಡದಿಂದ‌ ಭಂಡಾರದ ಆಗಮನದ ಸಂದರ್ಭ ಸಂದೇಶ್ ಮದ್ದಡ್ಕ ಇವರ ನೇತೃತ್ವದಲ್ಲಿ ಸುಮಾರು 10 ಭಜನಾ ತಂಡಗಳಿಂದ ಭಜನಾ ‌ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ದೀಕ್ಷಿತ್ ಅರಂತೊಟ್ಟು ಇವರ ಡಿಲೈಟ್ ಡೆಕೋರೇಷನ್ಸ್ (Delight Decorations) ನ್ನು ದ್ವಾರಕಾ ಡ್ರೈವಿಂಗ್ ಸ್ಕೂಲ್ ‌ಮಾಲಕರಾದ ಯಶವಂತ ಆರ್ ಬಾಳಿಗಾ ಉದ್ಘಾಟಿಸಿದರು.

ಈ ವೇಳೆ ಅರಂತೊಟ್ಟು ‌ಕುಟುಂಬಸ್ಥರ ವತಿಯಿಂದ ‌ಬೆಳ್ತಂಗಡಿ‌ ತಾಲೂಕಿನ ‌ಹೆಸರಾಂತ ಸ್ನೇಕ್‌‌ಮಾಸ್ಟರ್ ಅಶೋಕ್‌‌ಕುಮಾರ್ ಲಾಯಿಲ ಹಾಗೂ ಚಂದ್ರಶೇಖರ ‌ಗೌಡ ಮಾವಿನಕಟ್ಟೆ ಇವರಿಗೆ ಸನ್ಮಾನವನ್ನು ಯಶವಂತ ಬಾಳಿಗಾ ಹಾಗೂ ಪ್ರವೀಣ್ ಗೌಡ ನೆರವೇರಿಸಿದರು.

ಈ‌‌ ಸಂದರ್ಭದಲ್ಲಿ ಹಿತೇಶ್ ಬಳ್ಳಾಲ್ ಕೊಯ್ಯೂರು ಗುತ್ತು, ತೃಪ್ತ ಜೈನ್‌ ಉಣಿಲೆ ಗುತ್ತು, ಯಶವಂತ ಬಾಳಿಗಾ ಬೆಳ್ತಂಗಡಿ, ಪ್ರವೀಣ್ ಗೌಡ ಮಾವಿನಕಟ್ಟೆ ಹಾಗೂ ಅರಂತೊಟ್ಟು ‌ಕುಟುಂಬಸ್ಥರು ಮತ್ತು ಭಕ್ತಾದಿಗಳು ಊರ ಪರವೂರ‌ ಗಣ್ಯರು ಉಪಸ್ಥಿತರಿದ್ದರು.

Related posts

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya
error: Content is protected !!