July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ವನ್ಯಜೀವಿ ವಿಭಾಗದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ, ಹತೋಟಿಗೆ ಬಂದಿದ್ದು ಕಾಡ್ಗಿಚ್ಚಿನ ಭಯ ದೂರವಾಗಿದೆ.
ಮಾ.16 ಶನಿವಾರ ಸಂಜೆಯ ಹೊತ್ತಿಗೆ ಕುದುರೆಮುಖ ಪೀಕ್ ಕಡೆಯಿಂದ ಆವರಿಸಿದ ಬೆಂಕಿ ನಾವೂರು ಗ್ರಾಮದ ತೊಳಲಿಯ ಏಳುಸುತ್ತು ವರೆಗೆ ವ್ಯಾಪಿಸಿತ್ತು.


ಭಾನುವಾರ ಬೆಳಿಗ್ಗೆ ಬೆಳ್ತಂಗಡಿ ಮತ್ತು ಕುದುರೆಮುಖ ವನ್ಯಜೀವಿ ವಿಭಾಗದ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರುವ ಕಾರ್ಯಾಚರಣೆ ಆರಂಭಿಸಿದ್ದು ಸೋಮವಾರ ಸಂಜೆಯ ಹೊತ್ತಿಗೆ ಬೆಂಕಿ ಹತೋಟಿಗೆ ಬಂದಿದೆ. ಕುದುರೆಮುಖ ಕಡೆಯಿಂದ ಒಣಹುಲ್ಲಿಗೆ ಆವರಿಸಿದ ಬೆಂಕಿ ನಾವೂರು ತನಕವು ಬಂದಿದೆ. ಸುಮಾರು ಎರಡಾಳು ಎತ್ತರದ ಒಣಹುಲ್ಲಿಗೆ ಹಿಡಿಯುತ್ತಾ ಬಂದ ಬೆಂಕಿಯ ಕೆನ್ನಾಲಿಗೆ 10 ಕಿ.ಮೀ.ದೂರದವರೆಗೂ ಗೋಚರಿಸುತ್ತಿತ್ತು.
ಒಣ ಹುಲ್ಲಿಗೆ ಬೆಂಕಿ ಹಿಡಿದರೆ ವೇಗವಾಗಿ ಹರಡುತ್ತದೆ ಹಾಗೂ ಹೆಚ್ಚಾಗಿ ಹುಲ್ಲು ಇರುವ ಪ್ರದೇಶವನ್ನು ಮಾತ್ರ ಸುಡುತ್ತಾ ಮುಂದುವರಿಯುತ್ತದೆ. ಮಂದವಾಗಿ ಬೀಸುತ್ತಿದ್ದ ಗಾಳಿಯು ಬೆಂಕಿ ಹೆಚ್ಚು ಪ್ರಸರಿಸಲು ಕಾರಣವಾಗಿತ್ತು.
ಅರಣ್ಯ ಪ್ರವೇಶಿಸಿಲ್ಲ:
ಕೇವಲ ಒಣಹುಲ್ಲನ್ನು ಸುಟ್ಟ ಬೆಂಕಿ ಸಕಾಲಿಕ ಕಾರ್ಯಾಚರಣೆಯಿಂದ ಅರಣ್ಯವನ್ನು ಪ್ರವೇಶಿಸಿಲ್ಲ ಹಾಗೂ ಅರಣ್ಯ ಸಂಪತ್ತಿಗೆ ಯಾವುದೇ ರೀತಿ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ. ಭಾನುವಾರ ಸಂಜೆ ಕುದುರೆಮುಖ ವನ್ಯಜೀವಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಶಿವರಾಮ ಬಾಬು ನಾವೂರು ಪ್ರದೇಶಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದ್ದರು.

Related posts

  ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

Suddi Udaya

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya
error: Content is protected !!