24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ವನ್ಯಜೀವಿ ವಿಭಾಗದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ, ಹತೋಟಿಗೆ ಬಂದಿದ್ದು ಕಾಡ್ಗಿಚ್ಚಿನ ಭಯ ದೂರವಾಗಿದೆ.
ಮಾ.16 ಶನಿವಾರ ಸಂಜೆಯ ಹೊತ್ತಿಗೆ ಕುದುರೆಮುಖ ಪೀಕ್ ಕಡೆಯಿಂದ ಆವರಿಸಿದ ಬೆಂಕಿ ನಾವೂರು ಗ್ರಾಮದ ತೊಳಲಿಯ ಏಳುಸುತ್ತು ವರೆಗೆ ವ್ಯಾಪಿಸಿತ್ತು.


ಭಾನುವಾರ ಬೆಳಿಗ್ಗೆ ಬೆಳ್ತಂಗಡಿ ಮತ್ತು ಕುದುರೆಮುಖ ವನ್ಯಜೀವಿ ವಿಭಾಗದ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರುವ ಕಾರ್ಯಾಚರಣೆ ಆರಂಭಿಸಿದ್ದು ಸೋಮವಾರ ಸಂಜೆಯ ಹೊತ್ತಿಗೆ ಬೆಂಕಿ ಹತೋಟಿಗೆ ಬಂದಿದೆ. ಕುದುರೆಮುಖ ಕಡೆಯಿಂದ ಒಣಹುಲ್ಲಿಗೆ ಆವರಿಸಿದ ಬೆಂಕಿ ನಾವೂರು ತನಕವು ಬಂದಿದೆ. ಸುಮಾರು ಎರಡಾಳು ಎತ್ತರದ ಒಣಹುಲ್ಲಿಗೆ ಹಿಡಿಯುತ್ತಾ ಬಂದ ಬೆಂಕಿಯ ಕೆನ್ನಾಲಿಗೆ 10 ಕಿ.ಮೀ.ದೂರದವರೆಗೂ ಗೋಚರಿಸುತ್ತಿತ್ತು.
ಒಣ ಹುಲ್ಲಿಗೆ ಬೆಂಕಿ ಹಿಡಿದರೆ ವೇಗವಾಗಿ ಹರಡುತ್ತದೆ ಹಾಗೂ ಹೆಚ್ಚಾಗಿ ಹುಲ್ಲು ಇರುವ ಪ್ರದೇಶವನ್ನು ಮಾತ್ರ ಸುಡುತ್ತಾ ಮುಂದುವರಿಯುತ್ತದೆ. ಮಂದವಾಗಿ ಬೀಸುತ್ತಿದ್ದ ಗಾಳಿಯು ಬೆಂಕಿ ಹೆಚ್ಚು ಪ್ರಸರಿಸಲು ಕಾರಣವಾಗಿತ್ತು.
ಅರಣ್ಯ ಪ್ರವೇಶಿಸಿಲ್ಲ:
ಕೇವಲ ಒಣಹುಲ್ಲನ್ನು ಸುಟ್ಟ ಬೆಂಕಿ ಸಕಾಲಿಕ ಕಾರ್ಯಾಚರಣೆಯಿಂದ ಅರಣ್ಯವನ್ನು ಪ್ರವೇಶಿಸಿಲ್ಲ ಹಾಗೂ ಅರಣ್ಯ ಸಂಪತ್ತಿಗೆ ಯಾವುದೇ ರೀತಿ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ. ಭಾನುವಾರ ಸಂಜೆ ಕುದುರೆಮುಖ ವನ್ಯಜೀವಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಶಿವರಾಮ ಬಾಬು ನಾವೂರು ಪ್ರದೇಶಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದ್ದರು.

Related posts

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!