ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಸಮಾಜ ಸೇವೆಯನ್ನು ಗುರುತಿಸಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಈ ವರ್ಷದ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ನೀಡಿ ಗೌರವಿಸಿದೆ.

ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ನಾಯಕ್ ರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಮಾಲಕ ಮೋಹನ್ ಕುಮಾರ್ , ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ್ ,ಉಜಿರೆ ಸಂಧ್ಯಾ ಟ್ರೆಡರ್ಸ್ ಮಾಲೀಕ ರಾಜೇಶ್ ಪೈ , ಕನ್ನಡ ಚಲನಚಿತ್ರ ನಟ ರಮೇಶ್ ಅರವಿಂದ್, ಉದ್ಯಮಿ ರವಿ ಚಕ್ಕಿತ್ತಾಯ ಭಾಗಿಯಾಗಿದ್ದರು.

Leave a Comment

error: Content is protected !!