22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಸಾವನ್ನಪ್ಪಿದ ಘಟನೆ ಮಾ.18 ರಂದು ಸಂಜೆ ಶಂಭೂರಿನ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯಲ್ಲಿ ನಡೆದಿದೆ.

ನಡ ಗ್ರಾಮದ ಮಂಜೊಟ್ಟಿ ನಿವಾಸಿ ಲೋಹಿತಾಕ್ಷ (28) ಮೃತ ಯುವಕ.

ಸ್ನೇಹಿತರಾದ ವಿನ್ಸೆಂಟ್, ಮ್ಯಾಕ್ಸಿಂ, ಪ್ರಮೋದ್, ದಯಾನಂದ ಅವರ ಜೊತೆ ಕಾರಿನಲ್ಲಿ ಶಂಭೂರಿಗೆ ಹೋಗಿದ್ದು ಸ್ನೇಹಿತರು ಸ್ನಾನಕ್ಕೆಂದು ನದಿಗೆ ಇಳಿದಿದ್ದರೂ ಲೋಹಿತಾಕ್ಷ ನದಿ ದಡದಲ್ಲಿ ಕುಳಿತಿದ್ದರು. ಅದರೆ ಸ್ನೇಹಿತರು ಸ್ನಾನ ಮಾಡಿ ಹಿಂದಿರುಗಿದ ವೇಳೆ ಅವರು ನೀರಿನಲ್ಲಿ ಬಿದ್ದಿದ್ದರು. ಅವರ ತಲೆ ಹಿಂಭಾಗದಲ್ಲಿ ಗಾಯಗಳಾಗಿದ್ದು ದಡದಲ್ಲಿ ಕುಳಿತಿದ್ದ ಅವರ ಆರೋಗ್ಯದಲ್ಲಿ ಏನೋ ತೊಂದರೆ ಉಂಟಾಗಿ ತಲೆ ತಿರುಗಿ ಬಿದ್ದಿರಬಹುದೇ ಅಥವಾ ನದಿಯಲ್ಲಿ ನಡೆದುಕೊಂಡು ಬರುವಾಗ ಕಲ್ಲು ಜಾರಿ ಬಿದ್ದಿರಬಹುದೇ ಎಂದು ಶಂಕಿಸಲಾಗಿದೆ.

ಒಂದು ವೇಳೆ ಸ್ನಾನಕ್ಕಿಳಿಯುತಿದ್ದಲ್ಲಿ ಅವರ ಕೈಯಲ್ಲಿ ವಾಚ್ ಹಾಗೂ ಧರಿಸಿದ ಬಟ್ಟೆ ಹಾಗೆ ಇತ್ತೆನ್ನಲಾಗಿದೆ. ಲೋಹಿತಾಕ್ಷ ಅವರು ಎಲೆಕ್ಟಿಕಲ್ ಗುತ್ತಿಗೆ ಕೆಲಸಕ್ಕೆ ಹೋಗುತ್ತಿದ್ದರು. ಸೋಮವಾರ ಕೆಲಸಕ್ಕೆ ರಜೆ ಇದ್ದ ಕಾರಣ ಶಂಭೂರಿನಲ್ಲಿ ಗೆಳೆಯನೊಬ್ಬನ ಸಂಬಂಧಿಕರ ಮನೆ ಇದ್ದು ಅಲ್ಲಿಗೆ ತೆರಳಿ ನಂತರ ನೇತ್ರಾವತಿ ನದಿಗೆ ಸ್ನಾನಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಲೋಹಿತಾಕ್ಷ ಮನೆಯ ಅಧಾರ ಸ್ತಂಭವಾಗಿದ್ದು ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿತ್ತು. ನಡದಲ್ಲಿ ತಾಯಿ ಮತ್ತು ಪತ್ನಿ ಜತೆ ವಾಸಿಸುತಿದ್ದರು. ಕಳೆದ ಕೆಲವು ಸಮಯಗಳ ಹಿಂದೆ ಮಂಜೊಟ್ಟಿಯಲ್ಲಿ ನಡೆದ ಬಸ್‌ ಅಪಘಾತದಲ್ಲಿ ಇವರ ಮಾವನ ಮಗ ಮೃತಪಟ್ಟಿದ್ದರು.ವಿವಿಧ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಅವರು ಎಲ್ಲರೊಂದಿಗೆ ಆತ್ಮೀಯತೆಯಿಂದ ಇರುತಿದ್ದರು.

Related posts

ವೇಣೂರು ಎಸ್‌.ಡಿ.ಎಂ. ಐಟಿಐ ನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!