25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಿರಿಯ ಪತ್ರಕರ್ತ, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅವರ ಅಧ್ಯಕ್ಷತೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ನುಡಿ ನಮನ ಕಾರ್ಯಕ್ರಮವು ಸಂಘದ ಕಚೇರಿಯಲ್ಲಿ ಮಾ.19 ಮಂಗಳವಾರ ನಡೆಯಿತು.


ಸಂಘದ ಮಾಜಿ ಅಧ್ಯಕ್ಷ , ಹಿರಿಯ ಸದಸ್ಯ ಆರ್.ಎನ್.ಪೂವಣಿ ನಾ ’ವುಜಿರೆ’ಯವರ ಒಡನಾಟದ ದಿನಗಳನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು.


ಮಾಜಿ ಅಧ್ಯಕ್ಷರಾದ ಶ್ರೀನಿವಾಸ ತಂತ್ರಿ, ಪುಷ್ಪರಾಜ ಶೆಟ್ಟಿ, ಶಿಬಿ ಧರ್ಮಸ್ಥಳ, ಬಿ.ಎಸ್. ಕುಲಾಲ್ ನುಡಿನಮನ ಸಲ್ಲಿಸಿ ಒಡನಾಟದ ದಿನಗಳನ್ನು ಮೆಲುಕು ಹಾಕಿದರು. ಸಂಘದ ಪದಾಧಿಕಾರಿಗಳು, ಸದಸ್ಯರು ಪುಷ್ಪಾರ್ಚನೆಗೈದರು. ಈ ಸಂದರ್ಭ ಸಂಘದ ವತಿಯಿಂದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳಾದ ಮನೋಹರ್ ಬಳೆಂಜ, ಅಚುಶ್ರೀ ಬಾಂಗೇರು, ಹೃಷಿಕೇಶ್ ಧರ್ಮಸ್ಥಳ, ಮಾಜಿ ಕೋಶಾಧಿಕಾರಿ ತುಕರಾಮ್, ಜಾರಪ್ಪ ಪೂಜಾರಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ್ ಶಿರ್ಲಾಲು ನಿರೂಪಿಸಿ ವಂದಿಸಿದರು.

Related posts

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮುಗೇರಡ್ಕ ಶ್ರೀ ದೈವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

Suddi Udaya
error: Content is protected !!