22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಿರಿಯ ಪತ್ರಕರ್ತ, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅವರ ಅಧ್ಯಕ್ಷತೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ನುಡಿ ನಮನ ಕಾರ್ಯಕ್ರಮವು ಸಂಘದ ಕಚೇರಿಯಲ್ಲಿ ಮಾ.19 ಮಂಗಳವಾರ ನಡೆಯಿತು.


ಸಂಘದ ಮಾಜಿ ಅಧ್ಯಕ್ಷ , ಹಿರಿಯ ಸದಸ್ಯ ಆರ್.ಎನ್.ಪೂವಣಿ ನಾ ’ವುಜಿರೆ’ಯವರ ಒಡನಾಟದ ದಿನಗಳನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು.


ಮಾಜಿ ಅಧ್ಯಕ್ಷರಾದ ಶ್ರೀನಿವಾಸ ತಂತ್ರಿ, ಪುಷ್ಪರಾಜ ಶೆಟ್ಟಿ, ಶಿಬಿ ಧರ್ಮಸ್ಥಳ, ಬಿ.ಎಸ್. ಕುಲಾಲ್ ನುಡಿನಮನ ಸಲ್ಲಿಸಿ ಒಡನಾಟದ ದಿನಗಳನ್ನು ಮೆಲುಕು ಹಾಕಿದರು. ಸಂಘದ ಪದಾಧಿಕಾರಿಗಳು, ಸದಸ್ಯರು ಪುಷ್ಪಾರ್ಚನೆಗೈದರು. ಈ ಸಂದರ್ಭ ಸಂಘದ ವತಿಯಿಂದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳಾದ ಮನೋಹರ್ ಬಳೆಂಜ, ಅಚುಶ್ರೀ ಬಾಂಗೇರು, ಹೃಷಿಕೇಶ್ ಧರ್ಮಸ್ಥಳ, ಮಾಜಿ ಕೋಶಾಧಿಕಾರಿ ತುಕರಾಮ್, ಜಾರಪ್ಪ ಪೂಜಾರಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ್ ಶಿರ್ಲಾಲು ನಿರೂಪಿಸಿ ವಂದಿಸಿದರು.

Related posts

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya

ಕಾರಿಂಜ ಶ್ರೀ ವನ ಶಾಸ್ತಾರ , ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya
error: Content is protected !!