23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಿರಿಯ ಪತ್ರಕರ್ತ, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅವರ ಅಧ್ಯಕ್ಷತೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ನುಡಿ ನಮನ ಕಾರ್ಯಕ್ರಮವು ಸಂಘದ ಕಚೇರಿಯಲ್ಲಿ ಮಾ.19 ಮಂಗಳವಾರ ನಡೆಯಿತು.


ಸಂಘದ ಮಾಜಿ ಅಧ್ಯಕ್ಷ , ಹಿರಿಯ ಸದಸ್ಯ ಆರ್.ಎನ್.ಪೂವಣಿ ನಾ ’ವುಜಿರೆ’ಯವರ ಒಡನಾಟದ ದಿನಗಳನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು.


ಮಾಜಿ ಅಧ್ಯಕ್ಷರಾದ ಶ್ರೀನಿವಾಸ ತಂತ್ರಿ, ಪುಷ್ಪರಾಜ ಶೆಟ್ಟಿ, ಶಿಬಿ ಧರ್ಮಸ್ಥಳ, ಬಿ.ಎಸ್. ಕುಲಾಲ್ ನುಡಿನಮನ ಸಲ್ಲಿಸಿ ಒಡನಾಟದ ದಿನಗಳನ್ನು ಮೆಲುಕು ಹಾಕಿದರು. ಸಂಘದ ಪದಾಧಿಕಾರಿಗಳು, ಸದಸ್ಯರು ಪುಷ್ಪಾರ್ಚನೆಗೈದರು. ಈ ಸಂದರ್ಭ ಸಂಘದ ವತಿಯಿಂದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳಾದ ಮನೋಹರ್ ಬಳೆಂಜ, ಅಚುಶ್ರೀ ಬಾಂಗೇರು, ಹೃಷಿಕೇಶ್ ಧರ್ಮಸ್ಥಳ, ಮಾಜಿ ಕೋಶಾಧಿಕಾರಿ ತುಕರಾಮ್, ಜಾರಪ್ಪ ಪೂಜಾರಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ್ ಶಿರ್ಲಾಲು ನಿರೂಪಿಸಿ ವಂದಿಸಿದರು.

Related posts

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya
error: Content is protected !!