32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನ ಕೊಯ್ಯೂರು ಇದರ ವಾರ್ಷಿಕ ‌ಜಾತ್ರಾ ಮಹೋತ್ಸವದಂದು ಅರಂತೊಟ್ಟು ಕಟ್ಟೆಪೂಜೆಯನ್ನು ನೆರವೇರಿಸಲಾಯಿತು.

ಮೂಲಗುಂಡದಿಂದ‌ ಭಂಡಾರದ ಆಗಮನದ ಸಂದರ್ಭ ಸಂದೇಶ್ ಮದ್ದಡ್ಕ ಇವರ ನೇತೃತ್ವದಲ್ಲಿ ಸುಮಾರು 10 ಭಜನಾ ತಂಡಗಳಿಂದ ಭಜನಾ ‌ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ದೀಕ್ಷಿತ್ ಅರಂತೊಟ್ಟು ಇವರ ಡಿಲೈಟ್ ಡೆಕೋರೇಷನ್ಸ್ (Delight Decorations) ನ್ನು ದ್ವಾರಕಾ ಡ್ರೈವಿಂಗ್ ಸ್ಕೂಲ್ ‌ಮಾಲಕರಾದ ಯಶವಂತ ಆರ್ ಬಾಳಿಗಾ ಉದ್ಘಾಟಿಸಿದರು.

ಈ ವೇಳೆ ಅರಂತೊಟ್ಟು ‌ಕುಟುಂಬಸ್ಥರ ವತಿಯಿಂದ ‌ಬೆಳ್ತಂಗಡಿ‌ ತಾಲೂಕಿನ ‌ಹೆಸರಾಂತ ಸ್ನೇಕ್‌‌ಮಾಸ್ಟರ್ ಅಶೋಕ್‌‌ಕುಮಾರ್ ಲಾಯಿಲ ಹಾಗೂ ಚಂದ್ರಶೇಖರ ‌ಗೌಡ ಮಾವಿನಕಟ್ಟೆ ಇವರಿಗೆ ಸನ್ಮಾನವನ್ನು ಯಶವಂತ ಬಾಳಿಗಾ ಹಾಗೂ ಪ್ರವೀಣ್ ಗೌಡ ನೆರವೇರಿಸಿದರು.

ಈ‌‌ ಸಂದರ್ಭದಲ್ಲಿ ಹಿತೇಶ್ ಬಳ್ಳಾಲ್ ಕೊಯ್ಯೂರು ಗುತ್ತು, ತೃಪ್ತ ಜೈನ್‌ ಉಣಿಲೆ ಗುತ್ತು, ಯಶವಂತ ಬಾಳಿಗಾ ಬೆಳ್ತಂಗಡಿ, ಪ್ರವೀಣ್ ಗೌಡ ಮಾವಿನಕಟ್ಟೆ ಹಾಗೂ ಅರಂತೊಟ್ಟು ‌ಕುಟುಂಬಸ್ಥರು ಮತ್ತು ಭಕ್ತಾದಿಗಳು ಊರ ಪರವೂರ‌ ಗಣ್ಯರು ಉಪಸ್ಥಿತರಿದ್ದರು.

Related posts

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!