July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿಯೊಬ್ಬರು ಆಯತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಧರ್ಮಸ್ಥಳ ಬಸ್‌ ನಿಲ್ದಾಣದಲ್ಲಿ ಮಾ 17 ರಂದು ರಾತ್ರಿ ನಡೆದಿದೆ.

ಹುಬ್ಬಳ್ಳಿ ಬಸ್ಸಿನಲ್ಲಿ ಬಂದಿದ್ದ ಸುಮಾರು ಅಂದಾಜು 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳ ಬಸ್ ತಂಗುದಾಣದಲ್ಲಿ ಜನ ಹೆಚ್ಚಿದ್ದರಿಂದಾಗಿ ಕಿಟಕಿಯ ಮೂಲಕ ಇಳಿಯಲು ಪ್ರಯತ್ನಿಸಿದ್ದಾರೆ ಈ ವೇಳೆ ಆಯ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದದಾಗ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬಸ್ ನಿರ್ವಾಹಕ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತ ಅಪರಿಚಿತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿಗೆ ಧರ್ಮಸ್ಥಳ ಪೊಲೀಸ್‌ ಠಾಣೆ ಸಂಪರ್ಕಿಸುವಂತೆ ಕೋರಲಾಗಿದೆ.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”

Suddi Udaya

ಗುರುವಾಯನಕೆರೆ “ಎಕ್ಸೆಲ್” ಟೆಕ್ನೋ ಶಾಲೆಯಲ್ಲಿ ದೀಕ್ಷಾರಂಭ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya
error: Content is protected !!