24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ವನ್ಯಜೀವಿ ವಿಭಾಗದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ, ಹತೋಟಿಗೆ ಬಂದಿದ್ದು ಕಾಡ್ಗಿಚ್ಚಿನ ಭಯ ದೂರವಾಗಿದೆ.
ಮಾ.16 ಶನಿವಾರ ಸಂಜೆಯ ಹೊತ್ತಿಗೆ ಕುದುರೆಮುಖ ಪೀಕ್ ಕಡೆಯಿಂದ ಆವರಿಸಿದ ಬೆಂಕಿ ನಾವೂರು ಗ್ರಾಮದ ತೊಳಲಿಯ ಏಳುಸುತ್ತು ವರೆಗೆ ವ್ಯಾಪಿಸಿತ್ತು.


ಭಾನುವಾರ ಬೆಳಿಗ್ಗೆ ಬೆಳ್ತಂಗಡಿ ಮತ್ತು ಕುದುರೆಮುಖ ವನ್ಯಜೀವಿ ವಿಭಾಗದ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರುವ ಕಾರ್ಯಾಚರಣೆ ಆರಂಭಿಸಿದ್ದು ಸೋಮವಾರ ಸಂಜೆಯ ಹೊತ್ತಿಗೆ ಬೆಂಕಿ ಹತೋಟಿಗೆ ಬಂದಿದೆ. ಕುದುರೆಮುಖ ಕಡೆಯಿಂದ ಒಣಹುಲ್ಲಿಗೆ ಆವರಿಸಿದ ಬೆಂಕಿ ನಾವೂರು ತನಕವು ಬಂದಿದೆ. ಸುಮಾರು ಎರಡಾಳು ಎತ್ತರದ ಒಣಹುಲ್ಲಿಗೆ ಹಿಡಿಯುತ್ತಾ ಬಂದ ಬೆಂಕಿಯ ಕೆನ್ನಾಲಿಗೆ 10 ಕಿ.ಮೀ.ದೂರದವರೆಗೂ ಗೋಚರಿಸುತ್ತಿತ್ತು.
ಒಣ ಹುಲ್ಲಿಗೆ ಬೆಂಕಿ ಹಿಡಿದರೆ ವೇಗವಾಗಿ ಹರಡುತ್ತದೆ ಹಾಗೂ ಹೆಚ್ಚಾಗಿ ಹುಲ್ಲು ಇರುವ ಪ್ರದೇಶವನ್ನು ಮಾತ್ರ ಸುಡುತ್ತಾ ಮುಂದುವರಿಯುತ್ತದೆ. ಮಂದವಾಗಿ ಬೀಸುತ್ತಿದ್ದ ಗಾಳಿಯು ಬೆಂಕಿ ಹೆಚ್ಚು ಪ್ರಸರಿಸಲು ಕಾರಣವಾಗಿತ್ತು.
ಅರಣ್ಯ ಪ್ರವೇಶಿಸಿಲ್ಲ:
ಕೇವಲ ಒಣಹುಲ್ಲನ್ನು ಸುಟ್ಟ ಬೆಂಕಿ ಸಕಾಲಿಕ ಕಾರ್ಯಾಚರಣೆಯಿಂದ ಅರಣ್ಯವನ್ನು ಪ್ರವೇಶಿಸಿಲ್ಲ ಹಾಗೂ ಅರಣ್ಯ ಸಂಪತ್ತಿಗೆ ಯಾವುದೇ ರೀತಿ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ. ಭಾನುವಾರ ಸಂಜೆ ಕುದುರೆಮುಖ ವನ್ಯಜೀವಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಶಿವರಾಮ ಬಾಬು ನಾವೂರು ಪ್ರದೇಶಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದ್ದರು.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya
error: Content is protected !!