April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ವನ್ಯಜೀವಿ ವಿಭಾಗದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ, ಹತೋಟಿಗೆ ಬಂದಿದ್ದು ಕಾಡ್ಗಿಚ್ಚಿನ ಭಯ ದೂರವಾಗಿದೆ.
ಮಾ.16 ಶನಿವಾರ ಸಂಜೆಯ ಹೊತ್ತಿಗೆ ಕುದುರೆಮುಖ ಪೀಕ್ ಕಡೆಯಿಂದ ಆವರಿಸಿದ ಬೆಂಕಿ ನಾವೂರು ಗ್ರಾಮದ ತೊಳಲಿಯ ಏಳುಸುತ್ತು ವರೆಗೆ ವ್ಯಾಪಿಸಿತ್ತು.


ಭಾನುವಾರ ಬೆಳಿಗ್ಗೆ ಬೆಳ್ತಂಗಡಿ ಮತ್ತು ಕುದುರೆಮುಖ ವನ್ಯಜೀವಿ ವಿಭಾಗದ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರುವ ಕಾರ್ಯಾಚರಣೆ ಆರಂಭಿಸಿದ್ದು ಸೋಮವಾರ ಸಂಜೆಯ ಹೊತ್ತಿಗೆ ಬೆಂಕಿ ಹತೋಟಿಗೆ ಬಂದಿದೆ. ಕುದುರೆಮುಖ ಕಡೆಯಿಂದ ಒಣಹುಲ್ಲಿಗೆ ಆವರಿಸಿದ ಬೆಂಕಿ ನಾವೂರು ತನಕವು ಬಂದಿದೆ. ಸುಮಾರು ಎರಡಾಳು ಎತ್ತರದ ಒಣಹುಲ್ಲಿಗೆ ಹಿಡಿಯುತ್ತಾ ಬಂದ ಬೆಂಕಿಯ ಕೆನ್ನಾಲಿಗೆ 10 ಕಿ.ಮೀ.ದೂರದವರೆಗೂ ಗೋಚರಿಸುತ್ತಿತ್ತು.
ಒಣ ಹುಲ್ಲಿಗೆ ಬೆಂಕಿ ಹಿಡಿದರೆ ವೇಗವಾಗಿ ಹರಡುತ್ತದೆ ಹಾಗೂ ಹೆಚ್ಚಾಗಿ ಹುಲ್ಲು ಇರುವ ಪ್ರದೇಶವನ್ನು ಮಾತ್ರ ಸುಡುತ್ತಾ ಮುಂದುವರಿಯುತ್ತದೆ. ಮಂದವಾಗಿ ಬೀಸುತ್ತಿದ್ದ ಗಾಳಿಯು ಬೆಂಕಿ ಹೆಚ್ಚು ಪ್ರಸರಿಸಲು ಕಾರಣವಾಗಿತ್ತು.
ಅರಣ್ಯ ಪ್ರವೇಶಿಸಿಲ್ಲ:
ಕೇವಲ ಒಣಹುಲ್ಲನ್ನು ಸುಟ್ಟ ಬೆಂಕಿ ಸಕಾಲಿಕ ಕಾರ್ಯಾಚರಣೆಯಿಂದ ಅರಣ್ಯವನ್ನು ಪ್ರವೇಶಿಸಿಲ್ಲ ಹಾಗೂ ಅರಣ್ಯ ಸಂಪತ್ತಿಗೆ ಯಾವುದೇ ರೀತಿ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ. ಭಾನುವಾರ ಸಂಜೆ ಕುದುರೆಮುಖ ವನ್ಯಜೀವಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಶಿವರಾಮ ಬಾಬು ನಾವೂರು ಪ್ರದೇಶಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದ್ದರು.

Related posts

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya
error: Content is protected !!