ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ವನ್ಯಜೀವಿ ವಿಭಾಗದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ, ಹತೋಟಿಗೆ ಬಂದಿದ್ದು ಕಾಡ್ಗಿಚ್ಚಿನ ಭಯ ದೂರವಾಗಿದೆ.
ಮಾ.16 ಶನಿವಾರ ಸಂಜೆಯ ಹೊತ್ತಿಗೆ ಕುದುರೆಮುಖ ಪೀಕ್ ಕಡೆಯಿಂದ ಆವರಿಸಿದ ಬೆಂಕಿ ನಾವೂರು ಗ್ರಾಮದ ತೊಳಲಿಯ ಏಳುಸುತ್ತು ವರೆಗೆ ವ್ಯಾಪಿಸಿತ್ತು.


ಭಾನುವಾರ ಬೆಳಿಗ್ಗೆ ಬೆಳ್ತಂಗಡಿ ಮತ್ತು ಕುದುರೆಮುಖ ವನ್ಯಜೀವಿ ವಿಭಾಗದ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರುವ ಕಾರ್ಯಾಚರಣೆ ಆರಂಭಿಸಿದ್ದು ಸೋಮವಾರ ಸಂಜೆಯ ಹೊತ್ತಿಗೆ ಬೆಂಕಿ ಹತೋಟಿಗೆ ಬಂದಿದೆ. ಕುದುರೆಮುಖ ಕಡೆಯಿಂದ ಒಣಹುಲ್ಲಿಗೆ ಆವರಿಸಿದ ಬೆಂಕಿ ನಾವೂರು ತನಕವು ಬಂದಿದೆ. ಸುಮಾರು ಎರಡಾಳು ಎತ್ತರದ ಒಣಹುಲ್ಲಿಗೆ ಹಿಡಿಯುತ್ತಾ ಬಂದ ಬೆಂಕಿಯ ಕೆನ್ನಾಲಿಗೆ 10 ಕಿ.ಮೀ.ದೂರದವರೆಗೂ ಗೋಚರಿಸುತ್ತಿತ್ತು.
ಒಣ ಹುಲ್ಲಿಗೆ ಬೆಂಕಿ ಹಿಡಿದರೆ ವೇಗವಾಗಿ ಹರಡುತ್ತದೆ ಹಾಗೂ ಹೆಚ್ಚಾಗಿ ಹುಲ್ಲು ಇರುವ ಪ್ರದೇಶವನ್ನು ಮಾತ್ರ ಸುಡುತ್ತಾ ಮುಂದುವರಿಯುತ್ತದೆ. ಮಂದವಾಗಿ ಬೀಸುತ್ತಿದ್ದ ಗಾಳಿಯು ಬೆಂಕಿ ಹೆಚ್ಚು ಪ್ರಸರಿಸಲು ಕಾರಣವಾಗಿತ್ತು.
ಅರಣ್ಯ ಪ್ರವೇಶಿಸಿಲ್ಲ:
ಕೇವಲ ಒಣಹುಲ್ಲನ್ನು ಸುಟ್ಟ ಬೆಂಕಿ ಸಕಾಲಿಕ ಕಾರ್ಯಾಚರಣೆಯಿಂದ ಅರಣ್ಯವನ್ನು ಪ್ರವೇಶಿಸಿಲ್ಲ ಹಾಗೂ ಅರಣ್ಯ ಸಂಪತ್ತಿಗೆ ಯಾವುದೇ ರೀತಿ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ. ಭಾನುವಾರ ಸಂಜೆ ಕುದುರೆಮುಖ ವನ್ಯಜೀವಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ಶಿವರಾಮ ಬಾಬು ನಾವೂರು ಪ್ರದೇಶಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಾರ್ಯಾಚರಣೆಗೆ ಮಾರ್ಗದರ್ಶನ ನೀಡಿದ್ದರು.

Related posts

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

Suddi Udaya

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya
error: Content is protected !!