July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

ಉಜಿರೆ : ರೈತರೇ ಹೆಚ್ಚಾಗಿರುವ ಸಹಕಾರಿ ಸಂಘದ ಸದಸ್ಯರುಗಳಿಗೆ ಸರಕಾರ ನೀಡಿರುವ ಯಶಸ್ವಿನಿ ಯೋಜನೆಯಲ್ಲಿ ಇದೀಗ ಗ್ರಾಮೀಣ ಪ್ರದೇಶದಲ್ಲಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಎನ್ ಸಿ ಜಯರಾಮ್ ಯಶಸ್ವಿನಿ ಯೋಜನೆಯ ಫಲಾನುಭಾವಿಯಾಗಿದ್ದು, ಇವರಿಗೆ ಮಾ.14 ರಂದು ಬಲಕಾಲಿನ ಮೊಣಗಂಟು ಬದಲಿ ಶಸ್ತ್ರಚಿಕಿತ್ಸೆಯು (Total Knee replacement) ಯಶಸ್ವಿನಿ ಯೋಜನೆಯಡಿಯಲ್ಲಿ ಆಗಿದ್ದು, ಮಂಗಳೂರಿನ ಖ್ಯಾತ ಮೂಳೆ ತಜ್ಞರಾದ ಡಾ .ವಿಕ್ರಂ ಶೆಟ್ಟಿ, ಬೆನಕ ಆಸ್ಪತ್ರೆಯ ಎಲುಬು ಮತ್ತು ಮೂಳೆ ತಜ್ಞರಾದ ಡಾ. ರಜತ್, ವೈದ್ಯಕೀಯ ನಿರ್ದೇಶಕರಾದ ಡಾ ಗೋಪಾಲಕೃಷ್ಣರನ್ನು ಒಳಗೊಂಡ ತಂಡ ಈ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿಸಿದರು.

ಈಗ ರೋಗಿಯು ಉತ್ತಮವಾಗಿ ನಡೆಯುತ್ತಿದ್ದಾರೆ. ಯಶಸ್ವಿನಿ ಯೋಜನೆಯು ಗ್ರಾಮೀಣ ರೈತರಿಗೆ ವರದಾನವಾಗಿದೆ. ಅತ್ಯಂತ ಕ್ಲಿಷ್ಟ ಹಾಗೂ ಪಟ್ಟಣ ಪ್ರದೇಶದಲ್ಲಿ ನಡೆಸುವ ಈ ಶಸ್ತ್ರ ಚಿಕಿತ್ಸೆಯು ಇದೀಗ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ನಡೆದಿದ್ದು ಹೆಮ್ಮೆಯ ವಿಷಯ ಎಂದು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಇವರು ಪತ್ರಿಕಾ ಮಾದ್ಯಮಕ್ಕೆ ತಿಳಿಸಿದರು.

Related posts

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya
error: Content is protected !!