July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ :ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮೊದಲ ದಿನ ಇಂದು ದೇವಸ್ಥಾನದಲ್ಲಿ ಚಪ್ಪರ ಉದ್ಘಾಟನೆ ನೆರವೇರಿತು.

ಚಪ್ಪರ ಉದ್ಘಾಟನೆಯನ್ನು ಯು. ಗೋಪಾಲಕೃಷ್ಣ ಗೌಡ , ವಳಂಬ್ರ ಆಲಂಗಾವು ಇವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಬಿ.ಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಲೋಕೇಶ್ ರಾವ್, ಚಪ್ಪರ ಸಮಿತಿಯ ಸಂಚಾಲಕರಾದ ಕೇಶವ ಎಮ್.ಕೆ ಗೌರವ ಸಲಹೆಗಾರರಾದ ರಾಜು ದಿಡುಪೆ, ಆನಂದ ಆಚಾರ್ಯ, ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು ಚಪ್ಪರ ಉದ್ಘಾಟನೆಯಧಾರ್ಮಿಕ ವಿಧಿವಿಧಾನ ದೇವಸ್ಥಾನದ ಅರ್ಚಕರಾದ ಸುನಿಲ್ ಭಟ್ ನೆರವೇರಿಸಿದರು.

ಭಜನಾ ಕಾರ್ಯಕ್ರಮ ಉದ್ಘಾಟನೆ :

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮೊದಲ ದಿನ ಇಂದು ಶ್ರೀ ದುರ್ಗಾಪರಮೇಶ್ವರಿ ಪ್ರದಾನ ವೇದಿಕೆಯಲ್ಲಿ ಭಜನಾ ಕಾರ್ಯಕ್ರಮ ಉದ್ಘಾಟನೆ ನೆರವೇರಿತು
ಈ ಭಜನಾ ಕಾರ್ಯಕ್ರದ ಉದ್ಘಾಟನೆ ಮಧ್ವಾದೀಶ ವಿಠಲದಾಸ ನಾಮಾಂಕಿತ ಭಜನಾ ಸಂಪನ್ಮೂಲ ವ್ಯಕ್ತಿಗಳಾದ ರಾಮಕೃಷ್ಣ ಕಾಟುಕುಕ್ಕೆ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.


ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬಿಕೆ ಧನಂಜಯ ರಾವ್, ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ಕೋಶಾಧಿಕಾರಿ ವಾಸುದೇವ ರಾವ್ ಕಕ್ಕೆನೇಜಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಬಿಕೆ ಲೋಕೇಶ್ ರಾವ್, ವ್ಯವಸ್ಥಾಪನಾ ಸಮಿತಿ ಆಡಳಿತಾಧಿಕಾರಿ ಮೋಹನ್ ಬಂಗೇರ, ಭಜನಾ ಸಮಿತಿಯ ಸಂಚಾಲಕರಾದ ಗಣೇಶ್ ಗೌಡ ಪಗರೆ, ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya
error: Content is protected !!