25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

ಅಳದಂಗಡಿ: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಮಾ.26ರಿಂದ ಮಾ.28 ರವರೆಗೆ 77ನೇ ವರ್ಷದ ವಾರ್ಷಿಕ ನೇಮೋತ್ಸವವು ಜರಗಲಿರುವುದು.

ಮಾರ್ಚ್ 26ರಂದು ಬೆಳಿಗ್ಗೆ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಿಂದ ತೀರ್ಥ ತರುವುದು. ದೈವಗಳ ಭಂಡಾರ ಶುದ್ಧೀಕರಿಸಿ ಗಣಹೋಮ, ಅಂಗತ್ಯಾರು ಬಾಕಿಮಾರು ಗದ್ದೆಯಲ್ಲಿ ಮುಗೇರ ದೈವಗಳಿಗೆ ಮಂಜ ಸೇವೆಯು ನಡೆಯಲಿರುವುದು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಾಂಜೆ ಕುಡ್ಡಲಬೆಟ್ಟು ದೈವಸ್ಥಾನದಿಂದ ದೈವಗಳ ಭಂಡಾರ ಬರುವುದು, ಓಂಕಾರೇಶ್ವರ ಭಜನಾ ಮಂಡಳಿ ಪಜಿರಡ್ಕ ಕಲ್ಮಂಜ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ನೆಲ್ಯರಾಯ ಪಂಜುರ್ಲಿ ನೇಮೋತ್ಸವ, ರಾತ್ರಿ12 ಕ್ಕೆ ಮಹಾಕಾಳಿ ದೈವದ ನೇಮೋತ್ಸವ ನಡೆಯಲಿರುವುದು. ಮಾ. 27ರಂದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಬ್ರಹ್ಮ ಮೊಗೇರ ದೈವಗಳ ನೇಮೋತ್ಸವ, ರಾತ್ರಿ 12 ಕ್ಕೆ ತಂಗಡಿ ತನ್ನಿ ಮಾಣಿಗ ದೈವದ ನೇಮೋತ್ಸವ ಜರುಗಲಿರುವುದು.

ಮಾರ್ಚ್ 28ರಂದು ಬೆಳಿಗ್ಗೆ ಅಲೇರ ಪಂಜುರ್ಲಿ ದೈವದ ನೇಮೋತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ, ಸಂಜೆ ದೈವಗಳ ಭಂಡಾರ ಇಳಿಯುವುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!