September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

ಅಳದಂಗಡಿ: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಮಾ.26ರಿಂದ ಮಾ.28 ರವರೆಗೆ 77ನೇ ವರ್ಷದ ವಾರ್ಷಿಕ ನೇಮೋತ್ಸವವು ಜರಗಲಿರುವುದು.

ಮಾರ್ಚ್ 26ರಂದು ಬೆಳಿಗ್ಗೆ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಿಂದ ತೀರ್ಥ ತರುವುದು. ದೈವಗಳ ಭಂಡಾರ ಶುದ್ಧೀಕರಿಸಿ ಗಣಹೋಮ, ಅಂಗತ್ಯಾರು ಬಾಕಿಮಾರು ಗದ್ದೆಯಲ್ಲಿ ಮುಗೇರ ದೈವಗಳಿಗೆ ಮಂಜ ಸೇವೆಯು ನಡೆಯಲಿರುವುದು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಾಂಜೆ ಕುಡ್ಡಲಬೆಟ್ಟು ದೈವಸ್ಥಾನದಿಂದ ದೈವಗಳ ಭಂಡಾರ ಬರುವುದು, ಓಂಕಾರೇಶ್ವರ ಭಜನಾ ಮಂಡಳಿ ಪಜಿರಡ್ಕ ಕಲ್ಮಂಜ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ನೆಲ್ಯರಾಯ ಪಂಜುರ್ಲಿ ನೇಮೋತ್ಸವ, ರಾತ್ರಿ12 ಕ್ಕೆ ಮಹಾಕಾಳಿ ದೈವದ ನೇಮೋತ್ಸವ ನಡೆಯಲಿರುವುದು. ಮಾ. 27ರಂದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಬ್ರಹ್ಮ ಮೊಗೇರ ದೈವಗಳ ನೇಮೋತ್ಸವ, ರಾತ್ರಿ 12 ಕ್ಕೆ ತಂಗಡಿ ತನ್ನಿ ಮಾಣಿಗ ದೈವದ ನೇಮೋತ್ಸವ ಜರುಗಲಿರುವುದು.

ಮಾರ್ಚ್ 28ರಂದು ಬೆಳಿಗ್ಗೆ ಅಲೇರ ಪಂಜುರ್ಲಿ ದೈವದ ನೇಮೋತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ, ಸಂಜೆ ದೈವಗಳ ಭಂಡಾರ ಇಳಿಯುವುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ ರಾಜ್ಯ ಭಜನಾ ಪರಿಷತ್ ಸಭೆ

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya
error: Content is protected !!