23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

ಅಳದಂಗಡಿ: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಮಾ.26ರಿಂದ ಮಾ.28 ರವರೆಗೆ 77ನೇ ವರ್ಷದ ವಾರ್ಷಿಕ ನೇಮೋತ್ಸವವು ಜರಗಲಿರುವುದು.

ಮಾರ್ಚ್ 26ರಂದು ಬೆಳಿಗ್ಗೆ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಿಂದ ತೀರ್ಥ ತರುವುದು. ದೈವಗಳ ಭಂಡಾರ ಶುದ್ಧೀಕರಿಸಿ ಗಣಹೋಮ, ಅಂಗತ್ಯಾರು ಬಾಕಿಮಾರು ಗದ್ದೆಯಲ್ಲಿ ಮುಗೇರ ದೈವಗಳಿಗೆ ಮಂಜ ಸೇವೆಯು ನಡೆಯಲಿರುವುದು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಾಂಜೆ ಕುಡ್ಡಲಬೆಟ್ಟು ದೈವಸ್ಥಾನದಿಂದ ದೈವಗಳ ಭಂಡಾರ ಬರುವುದು, ಓಂಕಾರೇಶ್ವರ ಭಜನಾ ಮಂಡಳಿ ಪಜಿರಡ್ಕ ಕಲ್ಮಂಜ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ನೆಲ್ಯರಾಯ ಪಂಜುರ್ಲಿ ನೇಮೋತ್ಸವ, ರಾತ್ರಿ12 ಕ್ಕೆ ಮಹಾಕಾಳಿ ದೈವದ ನೇಮೋತ್ಸವ ನಡೆಯಲಿರುವುದು. ಮಾ. 27ರಂದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಬ್ರಹ್ಮ ಮೊಗೇರ ದೈವಗಳ ನೇಮೋತ್ಸವ, ರಾತ್ರಿ 12 ಕ್ಕೆ ತಂಗಡಿ ತನ್ನಿ ಮಾಣಿಗ ದೈವದ ನೇಮೋತ್ಸವ ಜರುಗಲಿರುವುದು.

ಮಾರ್ಚ್ 28ರಂದು ಬೆಳಿಗ್ಗೆ ಅಲೇರ ಪಂಜುರ್ಲಿ ದೈವದ ನೇಮೋತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ, ಸಂಜೆ ದೈವಗಳ ಭಂಡಾರ ಇಳಿಯುವುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya
error: Content is protected !!