July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

ರೆಖ್ಯ: ರೆಖ್ಯದ ಬೀಡು ನಿವಾಸಿ ಬಾಲಕೃಷ್ಣ ಗೌಡ ಅವರು ತೋಟಕ್ಕೆ ಹೋಗಿದ್ದ ಸಮಯದಲ್ಲಿ ಬೋರ್‌ವೆಲ್ ವಿಷಯವಾಗಿ ಮಾತುಕತೆ ನಡೆಯುತ್ತಿರುವ ಸಂದರ್ಭ ಗಂಗಾಧರ ಎಂಬವರು ಬಾಲಕೃಷ್ಣ ಗೌಡ ರವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದರೆಂದು ಆರೋಪಿಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೃಷಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಬಾಲಕೃಷ್ಣರವರು ತಮ್ಮ ಸುರೇಶ್ ಎಂಬವರಿಗೆ ರೆಖ್ಯ ಗ್ರಾಮದ ದೇವಸ ಎಂಬಲ್ಲಿರುವ ಸುಮಾರು 2 ಎಕರೆ ಜಾಗದಲ್ಲಿ ತಂದೆ-ತಾಯಿ, ತಮ್ಮ ಒಟ್ಟಿಗೆ ಹಳೆ ಮನೆಯಲ್ಲಿ ಇದ್ದೇವೆ. ಇತ್ತೀಚಿಗೆ ಹೊಸಮನೆ ನಿರ್ಮಾಣದ ಕೆಲಸ ಆಗುತ್ತಿದ್ದು, ಈ ಬಗ್ಗೆ ನಾನು ನಿನ್ನೆ ದಿನ ರಾತ್ರಿ 10 ಗಂಟೆಗೆ ಮನೆಯ ಕೆಲಸದ ಬಗ್ಗೆ ಹೋದಾಗ, ತಮ್ಮನ ಜಾಗದ ಬದಿಯಲ್ಲಿ ಭವಾನಿ ಎಂಬವರು ಬೋರ್‌ವೆಲ್ ಕೊರೆಯುತ್ತಿದ್ದರು.

ಈ ಬಗ್ಗೆ ಅಲ್ಲಿಯ ಸ್ಥಳಿಯ ಪಂ. ಸದಸ್ಯರಾದ ನಾಗೇಶ್ ಎಂಬುವರು, ಯಾಕೆ ಬೋರ್‌ವೆಲ್ ಕೊರೆಯುವುದು ಎಂದು ಅವರೊಳಗೆ ಮಾತುಕತೆಯಾಗುತ್ತಿತ್ತು. ಆ ಸಮಯ ನಾನು ಯಾಕೆ ಮಾತನಾಡುವುದು ಅವರು ಪಾಪದವರು ಬೋರ್‌ವೆಲ್ ತೆಗೆಯಲಿ ಎಂದು ಹೇಳಿದಾಗ ಕೋಪಗೊಂಡ ಗಂಗಾಧರ ಬಂದು, ಬೈದು ಕೈಯಿಂದ ಹಲ್ಲೆ ನಡೆಸಿದರೆಂದು ಆರೋಪಿಸಿದ್ದಾರೆ, ಪೊಲೀಸರು ದೂರು ಸ್ವೀಕರಿಸಿದ್ದಾರೆ.

Related posts

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya
error: Content is protected !!