24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

ನೆರಿಯ: ಸಿಯೋನ್ ಆಶ್ರಮವು ಕಳೆದ 25 ವರ್ಷಗಳಿಂದ ಅಶಕ್ತ, ಅನಾಥ ಮತ್ತು ವಿಶೇಷಚೇತನರನ್ನು ಯಾವುದೇ ಜಾತಿ- ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆ ಮಾಡುತ್ತಾ ಬಂದಿರುತ್ತದೆ. ಮಾ.22ರಂದು ಸಿಯೋನ್ ಆಶ್ರಮವು ತನ್ನ ಸೇವೆಯ 25 ಸಂವತ್ಸರಗಳನ್ನು ಪೂರ್ಣಗೊಳಿಸಿರುತ್ತದೆ. ಈ ಸಂದರ್ಭದಲ್ಲಿ “ಸಿಯೋನ್ ರಜತಮಹೋತ್ಸವ ಮತ್ತು ಕರ್ನಾಟಕ ಸುವರ್ಣ ಸಂಭ್ರಮ”ವನ್ನು ಜಂಟಿಯಾಗಿ ಆಚರಿಸಲು ಮಾ.21 ಮತ್ತು ಮಾ.22 ರಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಲೋಕಸಭೆ ಚುನಾವಣೆಯ ಪ್ರಯುಕ್ತ ಚುನಾವಣಾ ಆಯೋಗವು ಕಟ್ಟುನಿಟ್ಟಿನ ನೀತಿಸಂಹಿತೆ ಜಾರಿಗೊಳಿಸಿದೆ. ಆದುದರಿಂದ “ಸಿಯೋನ್ ಬೆಳ್ಳಿಹಬ್ಬ” ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯಾತಿಗಣ್ಯರಿಗೆ ಬರಲು ಅನಾನುಕೂಲವಾಗುವುದರಿಂದ ನಿಗದಿಪಡಿಸಲಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಿಯೋನ್ ಆಶ್ರಮದ ಮಾನೇಜಿಂಗ್ ಟ್ರಸ್ಟಿ ಯುಸಿ ಪೌಲೋಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
error: Content is protected !!