23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

ನೆರಿಯ: ಸಿಯೋನ್ ಆಶ್ರಮವು ಕಳೆದ 25 ವರ್ಷಗಳಿಂದ ಅಶಕ್ತ, ಅನಾಥ ಮತ್ತು ವಿಶೇಷಚೇತನರನ್ನು ಯಾವುದೇ ಜಾತಿ- ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆ ಮಾಡುತ್ತಾ ಬಂದಿರುತ್ತದೆ. ಮಾ.22ರಂದು ಸಿಯೋನ್ ಆಶ್ರಮವು ತನ್ನ ಸೇವೆಯ 25 ಸಂವತ್ಸರಗಳನ್ನು ಪೂರ್ಣಗೊಳಿಸಿರುತ್ತದೆ. ಈ ಸಂದರ್ಭದಲ್ಲಿ “ಸಿಯೋನ್ ರಜತಮಹೋತ್ಸವ ಮತ್ತು ಕರ್ನಾಟಕ ಸುವರ್ಣ ಸಂಭ್ರಮ”ವನ್ನು ಜಂಟಿಯಾಗಿ ಆಚರಿಸಲು ಮಾ.21 ಮತ್ತು ಮಾ.22 ರಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಲೋಕಸಭೆ ಚುನಾವಣೆಯ ಪ್ರಯುಕ್ತ ಚುನಾವಣಾ ಆಯೋಗವು ಕಟ್ಟುನಿಟ್ಟಿನ ನೀತಿಸಂಹಿತೆ ಜಾರಿಗೊಳಿಸಿದೆ. ಆದುದರಿಂದ “ಸಿಯೋನ್ ಬೆಳ್ಳಿಹಬ್ಬ” ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯಾತಿಗಣ್ಯರಿಗೆ ಬರಲು ಅನಾನುಕೂಲವಾಗುವುದರಿಂದ ನಿಗದಿಪಡಿಸಲಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಿಯೋನ್ ಆಶ್ರಮದ ಮಾನೇಜಿಂಗ್ ಟ್ರಸ್ಟಿ ಯುಸಿ ಪೌಲೋಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ರಾಜ್ಯದಲ್ಲೇ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya
error: Content is protected !!