ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಬಂಗೇರ ಅವರನ್ನು ಸನ್ಮಾನಿಸಲಾಯಿತು.

 ಕಾಶಿಪಟ್ಣ ಗ್ರಾ.ಪಂ.ಅಧ್ಯಕ್ಷರಾಗಿ, ಪೆರಾಡಿ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾಗಿ ಹಾಗೂ ಇನ್ನೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಸರ್ವಧರ್ಮೀಯರ ಮನಗೆದ್ದಿರುವ ಸತೀಶ್ ಬಂಗೇರ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಜೀವಂಧರ ಕುಮಾರ್, ವಿಕಾಸ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Leave a Comment

error: Content is protected !!