25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಿದೇಶಕ್ಕೆ ಹೋಗುವ ಕನಸು ಹೊತ್ತಿದ್ದ ವ್ಯಕ್ತಿಯೋರ್ವರಿಗೆ ಪರಿಚಿತನೋರ್ವ ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪ್ರಕರಣವೊಂದು ಹತ್ಯಡ್ಕ ಗ್ರಾಮದಿಂದ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನಿವಾಸಿ ಅಲ್ಬಿನ್ ಕೆ.ಆರ್ ಎಂಬವರೇ ಪರಿಚಿತ ಮನೋಜ್ ಎಂಬಾತನಿಂದ ವೀಸಾ ವಂಚನೆಗೊಳಗಾದ ವ್ಯಕ್ತಿಯಾಗಿದ್ದಾರೆ.

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನಿವಾಸಿ ರೆಜಿ ಕೆ.ಎ.(47) ಎಂಬವರ ಪುತ್ರ ಅಲ್ಬಿನ್ ಕೆ.ಆರ್ ಎಂಬವರಿಗೆ ಪೋಲ್ಯಾಂಡ್‌ ದೇಶದಲ್ಲಿ ಉದ್ಯೋಗಕ್ಕೆ ಹೋಗಲು ಆಪಾದಿತ ಮನೋಜ್ ಎಂಬಾತನು ವೀಸಾ ಕೊಡಿಸುವುದಾಗಿ ನಂಬಿಸಿ ವಂಚಿಸಿರುವುದಾಗಿದೆ.

ಮನೋಜ್ ಎಂಬಾತನು 2023ರ ಮೇ 22 ರಿಂದ 2024ರ ಮಾ19ರ ಅವಧಿಯಲ್ಲಿ ವಿವಿಧ ಕಾರಣಗಳನ್ನು ನೀಡಿ ಮನೋಜ್ ಅವರಿಂದ ಹಂತ ಹಂತವಾಗಿ ಒಟ್ಟು 2,50,000 ರೂಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದನು. ಆದರೆ ಈತ ಇದುವರೆಗೆ ಕೊಟ್ಟ ಮಾತಿನಂತೆ ಅಲ್ಬಿನ್ ಕೆ.ಆರ್ ಅವರಿಗೆ ವೀಸಾವನ್ನು ಕೊಡಿಸದೇ ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿರುವ ಘಟನೆ ನಡೆದಿದೆ.

ಇದೀಗ ವಂಚನೆಗೊಳಗಾದ ಅಲ್ಬಿನ್ ಕೆ.ಆರ್ ಎಂಬವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya
error: Content is protected !!