September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಿದೇಶಕ್ಕೆ ಹೋಗುವ ಕನಸು ಹೊತ್ತಿದ್ದ ವ್ಯಕ್ತಿಯೋರ್ವರಿಗೆ ಪರಿಚಿತನೋರ್ವ ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಪ್ರಕರಣವೊಂದು ಹತ್ಯಡ್ಕ ಗ್ರಾಮದಿಂದ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನಿವಾಸಿ ಅಲ್ಬಿನ್ ಕೆ.ಆರ್ ಎಂಬವರೇ ಪರಿಚಿತ ಮನೋಜ್ ಎಂಬಾತನಿಂದ ವೀಸಾ ವಂಚನೆಗೊಳಗಾದ ವ್ಯಕ್ತಿಯಾಗಿದ್ದಾರೆ.

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನಿವಾಸಿ ರೆಜಿ ಕೆ.ಎ.(47) ಎಂಬವರ ಪುತ್ರ ಅಲ್ಬಿನ್ ಕೆ.ಆರ್ ಎಂಬವರಿಗೆ ಪೋಲ್ಯಾಂಡ್‌ ದೇಶದಲ್ಲಿ ಉದ್ಯೋಗಕ್ಕೆ ಹೋಗಲು ಆಪಾದಿತ ಮನೋಜ್ ಎಂಬಾತನು ವೀಸಾ ಕೊಡಿಸುವುದಾಗಿ ನಂಬಿಸಿ ವಂಚಿಸಿರುವುದಾಗಿದೆ.

ಮನೋಜ್ ಎಂಬಾತನು 2023ರ ಮೇ 22 ರಿಂದ 2024ರ ಮಾ19ರ ಅವಧಿಯಲ್ಲಿ ವಿವಿಧ ಕಾರಣಗಳನ್ನು ನೀಡಿ ಮನೋಜ್ ಅವರಿಂದ ಹಂತ ಹಂತವಾಗಿ ಒಟ್ಟು 2,50,000 ರೂಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದನು. ಆದರೆ ಈತ ಇದುವರೆಗೆ ಕೊಟ್ಟ ಮಾತಿನಂತೆ ಅಲ್ಬಿನ್ ಕೆ.ಆರ್ ಅವರಿಗೆ ವೀಸಾವನ್ನು ಕೊಡಿಸದೇ ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿರುವ ಘಟನೆ ನಡೆದಿದೆ.

ಇದೀಗ ವಂಚನೆಗೊಳಗಾದ ಅಲ್ಬಿನ್ ಕೆ.ಆರ್ ಎಂಬವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya
error: Content is protected !!