38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

ಉಜಿರೆ : ರೈತರೇ ಹೆಚ್ಚಾಗಿರುವ ಸಹಕಾರಿ ಸಂಘದ ಸದಸ್ಯರುಗಳಿಗೆ ಸರಕಾರ ನೀಡಿರುವ ಯಶಸ್ವಿನಿ ಯೋಜನೆಯಲ್ಲಿ ಇದೀಗ ಗ್ರಾಮೀಣ ಪ್ರದೇಶದಲ್ಲಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಎನ್ ಸಿ ಜಯರಾಮ್ ಯಶಸ್ವಿನಿ ಯೋಜನೆಯ ಫಲಾನುಭಾವಿಯಾಗಿದ್ದು, ಇವರಿಗೆ ಮಾ.14 ರಂದು ಬಲಕಾಲಿನ ಮೊಣಗಂಟು ಬದಲಿ ಶಸ್ತ್ರಚಿಕಿತ್ಸೆಯು (Total Knee replacement) ಯಶಸ್ವಿನಿ ಯೋಜನೆಯಡಿಯಲ್ಲಿ ಆಗಿದ್ದು, ಮಂಗಳೂರಿನ ಖ್ಯಾತ ಮೂಳೆ ತಜ್ಞರಾದ ಡಾ .ವಿಕ್ರಂ ಶೆಟ್ಟಿ, ಬೆನಕ ಆಸ್ಪತ್ರೆಯ ಎಲುಬು ಮತ್ತು ಮೂಳೆ ತಜ್ಞರಾದ ಡಾ. ರಜತ್, ವೈದ್ಯಕೀಯ ನಿರ್ದೇಶಕರಾದ ಡಾ ಗೋಪಾಲಕೃಷ್ಣರನ್ನು ಒಳಗೊಂಡ ತಂಡ ಈ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿಸಿದರು.

ಈಗ ರೋಗಿಯು ಉತ್ತಮವಾಗಿ ನಡೆಯುತ್ತಿದ್ದಾರೆ. ಯಶಸ್ವಿನಿ ಯೋಜನೆಯು ಗ್ರಾಮೀಣ ರೈತರಿಗೆ ವರದಾನವಾಗಿದೆ. ಅತ್ಯಂತ ಕ್ಲಿಷ್ಟ ಹಾಗೂ ಪಟ್ಟಣ ಪ್ರದೇಶದಲ್ಲಿ ನಡೆಸುವ ಈ ಶಸ್ತ್ರ ಚಿಕಿತ್ಸೆಯು ಇದೀಗ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ನಡೆದಿದ್ದು ಹೆಮ್ಮೆಯ ವಿಷಯ ಎಂದು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಇವರು ಪತ್ರಿಕಾ ಮಾದ್ಯಮಕ್ಕೆ ತಿಳಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಉಪ್ಪಿನಂಗಡಿ-ಕುಪ್ಪೆಟ್ಟಿ ಹೆದ್ದಾರಿಯಲ್ಲಿ ಮರಣ ಗುಂಡಿಗಳ ತಾಂಡವ: ದುಸ್ತರಗೊಂಡ ಸಂಚಾರ | ವಾಹನ ಸವಾರರಿಗೆ ತೀವ್ರ ಸಂಕಷ್ಟ: ಸುದ್ದಿ ಉದಯ ಜನಧ್ವನಿ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ.18)ದ.ಕ. ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya
error: Content is protected !!