April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

ಉಜಿರೆ : ರೈತರೇ ಹೆಚ್ಚಾಗಿರುವ ಸಹಕಾರಿ ಸಂಘದ ಸದಸ್ಯರುಗಳಿಗೆ ಸರಕಾರ ನೀಡಿರುವ ಯಶಸ್ವಿನಿ ಯೋಜನೆಯಲ್ಲಿ ಇದೀಗ ಗ್ರಾಮೀಣ ಪ್ರದೇಶದಲ್ಲಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಎನ್ ಸಿ ಜಯರಾಮ್ ಯಶಸ್ವಿನಿ ಯೋಜನೆಯ ಫಲಾನುಭಾವಿಯಾಗಿದ್ದು, ಇವರಿಗೆ ಮಾ.14 ರಂದು ಬಲಕಾಲಿನ ಮೊಣಗಂಟು ಬದಲಿ ಶಸ್ತ್ರಚಿಕಿತ್ಸೆಯು (Total Knee replacement) ಯಶಸ್ವಿನಿ ಯೋಜನೆಯಡಿಯಲ್ಲಿ ಆಗಿದ್ದು, ಮಂಗಳೂರಿನ ಖ್ಯಾತ ಮೂಳೆ ತಜ್ಞರಾದ ಡಾ .ವಿಕ್ರಂ ಶೆಟ್ಟಿ, ಬೆನಕ ಆಸ್ಪತ್ರೆಯ ಎಲುಬು ಮತ್ತು ಮೂಳೆ ತಜ್ಞರಾದ ಡಾ. ರಜತ್, ವೈದ್ಯಕೀಯ ನಿರ್ದೇಶಕರಾದ ಡಾ ಗೋಪಾಲಕೃಷ್ಣರನ್ನು ಒಳಗೊಂಡ ತಂಡ ಈ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿಸಿದರು.

ಈಗ ರೋಗಿಯು ಉತ್ತಮವಾಗಿ ನಡೆಯುತ್ತಿದ್ದಾರೆ. ಯಶಸ್ವಿನಿ ಯೋಜನೆಯು ಗ್ರಾಮೀಣ ರೈತರಿಗೆ ವರದಾನವಾಗಿದೆ. ಅತ್ಯಂತ ಕ್ಲಿಷ್ಟ ಹಾಗೂ ಪಟ್ಟಣ ಪ್ರದೇಶದಲ್ಲಿ ನಡೆಸುವ ಈ ಶಸ್ತ್ರ ಚಿಕಿತ್ಸೆಯು ಇದೀಗ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ನಡೆದಿದ್ದು ಹೆಮ್ಮೆಯ ವಿಷಯ ಎಂದು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಇವರು ಪತ್ರಿಕಾ ಮಾದ್ಯಮಕ್ಕೆ ತಿಳಿಸಿದರು.

Related posts

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya
error: Content is protected !!