23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

ಉಜಿರೆ : ರೈತರೇ ಹೆಚ್ಚಾಗಿರುವ ಸಹಕಾರಿ ಸಂಘದ ಸದಸ್ಯರುಗಳಿಗೆ ಸರಕಾರ ನೀಡಿರುವ ಯಶಸ್ವಿನಿ ಯೋಜನೆಯಲ್ಲಿ ಇದೀಗ ಗ್ರಾಮೀಣ ಪ್ರದೇಶದಲ್ಲಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಎನ್ ಸಿ ಜಯರಾಮ್ ಯಶಸ್ವಿನಿ ಯೋಜನೆಯ ಫಲಾನುಭಾವಿಯಾಗಿದ್ದು, ಇವರಿಗೆ ಮಾ.14 ರಂದು ಬಲಕಾಲಿನ ಮೊಣಗಂಟು ಬದಲಿ ಶಸ್ತ್ರಚಿಕಿತ್ಸೆಯು (Total Knee replacement) ಯಶಸ್ವಿನಿ ಯೋಜನೆಯಡಿಯಲ್ಲಿ ಆಗಿದ್ದು, ಮಂಗಳೂರಿನ ಖ್ಯಾತ ಮೂಳೆ ತಜ್ಞರಾದ ಡಾ .ವಿಕ್ರಂ ಶೆಟ್ಟಿ, ಬೆನಕ ಆಸ್ಪತ್ರೆಯ ಎಲುಬು ಮತ್ತು ಮೂಳೆ ತಜ್ಞರಾದ ಡಾ. ರಜತ್, ವೈದ್ಯಕೀಯ ನಿರ್ದೇಶಕರಾದ ಡಾ ಗೋಪಾಲಕೃಷ್ಣರನ್ನು ಒಳಗೊಂಡ ತಂಡ ಈ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿಸಿದರು.

ಈಗ ರೋಗಿಯು ಉತ್ತಮವಾಗಿ ನಡೆಯುತ್ತಿದ್ದಾರೆ. ಯಶಸ್ವಿನಿ ಯೋಜನೆಯು ಗ್ರಾಮೀಣ ರೈತರಿಗೆ ವರದಾನವಾಗಿದೆ. ಅತ್ಯಂತ ಕ್ಲಿಷ್ಟ ಹಾಗೂ ಪಟ್ಟಣ ಪ್ರದೇಶದಲ್ಲಿ ನಡೆಸುವ ಈ ಶಸ್ತ್ರ ಚಿಕಿತ್ಸೆಯು ಇದೀಗ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ನಡೆದಿದ್ದು ಹೆಮ್ಮೆಯ ವಿಷಯ ಎಂದು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಇವರು ಪತ್ರಿಕಾ ಮಾದ್ಯಮಕ್ಕೆ ತಿಳಿಸಿದರು.

Related posts

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

Suddi Udaya
error: Content is protected !!