September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

ಉಜಿರೆ : ರೈತರೇ ಹೆಚ್ಚಾಗಿರುವ ಸಹಕಾರಿ ಸಂಘದ ಸದಸ್ಯರುಗಳಿಗೆ ಸರಕಾರ ನೀಡಿರುವ ಯಶಸ್ವಿನಿ ಯೋಜನೆಯಲ್ಲಿ ಇದೀಗ ಗ್ರಾಮೀಣ ಪ್ರದೇಶದಲ್ಲಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಎನ್ ಸಿ ಜಯರಾಮ್ ಯಶಸ್ವಿನಿ ಯೋಜನೆಯ ಫಲಾನುಭಾವಿಯಾಗಿದ್ದು, ಇವರಿಗೆ ಮಾ.14 ರಂದು ಬಲಕಾಲಿನ ಮೊಣಗಂಟು ಬದಲಿ ಶಸ್ತ್ರಚಿಕಿತ್ಸೆಯು (Total Knee replacement) ಯಶಸ್ವಿನಿ ಯೋಜನೆಯಡಿಯಲ್ಲಿ ಆಗಿದ್ದು, ಮಂಗಳೂರಿನ ಖ್ಯಾತ ಮೂಳೆ ತಜ್ಞರಾದ ಡಾ .ವಿಕ್ರಂ ಶೆಟ್ಟಿ, ಬೆನಕ ಆಸ್ಪತ್ರೆಯ ಎಲುಬು ಮತ್ತು ಮೂಳೆ ತಜ್ಞರಾದ ಡಾ. ರಜತ್, ವೈದ್ಯಕೀಯ ನಿರ್ದೇಶಕರಾದ ಡಾ ಗೋಪಾಲಕೃಷ್ಣರನ್ನು ಒಳಗೊಂಡ ತಂಡ ಈ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿಸಿದರು.

ಈಗ ರೋಗಿಯು ಉತ್ತಮವಾಗಿ ನಡೆಯುತ್ತಿದ್ದಾರೆ. ಯಶಸ್ವಿನಿ ಯೋಜನೆಯು ಗ್ರಾಮೀಣ ರೈತರಿಗೆ ವರದಾನವಾಗಿದೆ. ಅತ್ಯಂತ ಕ್ಲಿಷ್ಟ ಹಾಗೂ ಪಟ್ಟಣ ಪ್ರದೇಶದಲ್ಲಿ ನಡೆಸುವ ಈ ಶಸ್ತ್ರ ಚಿಕಿತ್ಸೆಯು ಇದೀಗ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ನಡೆದಿದ್ದು ಹೆಮ್ಮೆಯ ವಿಷಯ ಎಂದು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಇವರು ಪತ್ರಿಕಾ ಮಾದ್ಯಮಕ್ಕೆ ತಿಳಿಸಿದರು.

Related posts

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya
error: Content is protected !!