23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

ಉಜಿರೆ : ರೈತರೇ ಹೆಚ್ಚಾಗಿರುವ ಸಹಕಾರಿ ಸಂಘದ ಸದಸ್ಯರುಗಳಿಗೆ ಸರಕಾರ ನೀಡಿರುವ ಯಶಸ್ವಿನಿ ಯೋಜನೆಯಲ್ಲಿ ಇದೀಗ ಗ್ರಾಮೀಣ ಪ್ರದೇಶದಲ್ಲಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಎನ್ ಸಿ ಜಯರಾಮ್ ಯಶಸ್ವಿನಿ ಯೋಜನೆಯ ಫಲಾನುಭಾವಿಯಾಗಿದ್ದು, ಇವರಿಗೆ ಮಾ.14 ರಂದು ಬಲಕಾಲಿನ ಮೊಣಗಂಟು ಬದಲಿ ಶಸ್ತ್ರಚಿಕಿತ್ಸೆಯು (Total Knee replacement) ಯಶಸ್ವಿನಿ ಯೋಜನೆಯಡಿಯಲ್ಲಿ ಆಗಿದ್ದು, ಮಂಗಳೂರಿನ ಖ್ಯಾತ ಮೂಳೆ ತಜ್ಞರಾದ ಡಾ .ವಿಕ್ರಂ ಶೆಟ್ಟಿ, ಬೆನಕ ಆಸ್ಪತ್ರೆಯ ಎಲುಬು ಮತ್ತು ಮೂಳೆ ತಜ್ಞರಾದ ಡಾ. ರಜತ್, ವೈದ್ಯಕೀಯ ನಿರ್ದೇಶಕರಾದ ಡಾ ಗೋಪಾಲಕೃಷ್ಣರನ್ನು ಒಳಗೊಂಡ ತಂಡ ಈ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿಸಿದರು.

ಈಗ ರೋಗಿಯು ಉತ್ತಮವಾಗಿ ನಡೆಯುತ್ತಿದ್ದಾರೆ. ಯಶಸ್ವಿನಿ ಯೋಜನೆಯು ಗ್ರಾಮೀಣ ರೈತರಿಗೆ ವರದಾನವಾಗಿದೆ. ಅತ್ಯಂತ ಕ್ಲಿಷ್ಟ ಹಾಗೂ ಪಟ್ಟಣ ಪ್ರದೇಶದಲ್ಲಿ ನಡೆಸುವ ಈ ಶಸ್ತ್ರ ಚಿಕಿತ್ಸೆಯು ಇದೀಗ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ನಡೆದಿದ್ದು ಹೆಮ್ಮೆಯ ವಿಷಯ ಎಂದು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಇವರು ಪತ್ರಿಕಾ ಮಾದ್ಯಮಕ್ಕೆ ತಿಳಿಸಿದರು.

Related posts

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya
error: Content is protected !!