July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

ಉಜಿರೆ : ರೈತರೇ ಹೆಚ್ಚಾಗಿರುವ ಸಹಕಾರಿ ಸಂಘದ ಸದಸ್ಯರುಗಳಿಗೆ ಸರಕಾರ ನೀಡಿರುವ ಯಶಸ್ವಿನಿ ಯೋಜನೆಯಲ್ಲಿ ಇದೀಗ ಗ್ರಾಮೀಣ ಪ್ರದೇಶದಲ್ಲಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಎನ್ ಸಿ ಜಯರಾಮ್ ಯಶಸ್ವಿನಿ ಯೋಜನೆಯ ಫಲಾನುಭಾವಿಯಾಗಿದ್ದು, ಇವರಿಗೆ ಮಾ.14 ರಂದು ಬಲಕಾಲಿನ ಮೊಣಗಂಟು ಬದಲಿ ಶಸ್ತ್ರಚಿಕಿತ್ಸೆಯು (Total Knee replacement) ಯಶಸ್ವಿನಿ ಯೋಜನೆಯಡಿಯಲ್ಲಿ ಆಗಿದ್ದು, ಮಂಗಳೂರಿನ ಖ್ಯಾತ ಮೂಳೆ ತಜ್ಞರಾದ ಡಾ .ವಿಕ್ರಂ ಶೆಟ್ಟಿ, ಬೆನಕ ಆಸ್ಪತ್ರೆಯ ಎಲುಬು ಮತ್ತು ಮೂಳೆ ತಜ್ಞರಾದ ಡಾ. ರಜತ್, ವೈದ್ಯಕೀಯ ನಿರ್ದೇಶಕರಾದ ಡಾ ಗೋಪಾಲಕೃಷ್ಣರನ್ನು ಒಳಗೊಂಡ ತಂಡ ಈ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿಸಿದರು.

ಈಗ ರೋಗಿಯು ಉತ್ತಮವಾಗಿ ನಡೆಯುತ್ತಿದ್ದಾರೆ. ಯಶಸ್ವಿನಿ ಯೋಜನೆಯು ಗ್ರಾಮೀಣ ರೈತರಿಗೆ ವರದಾನವಾಗಿದೆ. ಅತ್ಯಂತ ಕ್ಲಿಷ್ಟ ಹಾಗೂ ಪಟ್ಟಣ ಪ್ರದೇಶದಲ್ಲಿ ನಡೆಸುವ ಈ ಶಸ್ತ್ರ ಚಿಕಿತ್ಸೆಯು ಇದೀಗ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ನಡೆದಿದ್ದು ಹೆಮ್ಮೆಯ ವಿಷಯ ಎಂದು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಇವರು ಪತ್ರಿಕಾ ಮಾದ್ಯಮಕ್ಕೆ ತಿಳಿಸಿದರು.

Related posts

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಏಕರೂಪ ಸಮವಸ್ತ್ರ ನೀತಿ ಪಾಲನೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆ ಅಕ್ರಮ ಗೋಹತ್ಯೆ ತಡೆಗೆ ಆಗ್ರಹ: ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರ್ ರಿಗೆ ಮನವಿ

Suddi Udaya

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

Suddi Udaya
error: Content is protected !!