27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ :ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮೊದಲ ದಿನ ಇಂದು ದೇವಸ್ಥಾನದಲ್ಲಿ ಚಪ್ಪರ ಉದ್ಘಾಟನೆ ನೆರವೇರಿತು.

ಚಪ್ಪರ ಉದ್ಘಾಟನೆಯನ್ನು ಯು. ಗೋಪಾಲಕೃಷ್ಣ ಗೌಡ , ವಳಂಬ್ರ ಆಲಂಗಾವು ಇವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಬಿ.ಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಲೋಕೇಶ್ ರಾವ್, ಚಪ್ಪರ ಸಮಿತಿಯ ಸಂಚಾಲಕರಾದ ಕೇಶವ ಎಮ್.ಕೆ ಗೌರವ ಸಲಹೆಗಾರರಾದ ರಾಜು ದಿಡುಪೆ, ಆನಂದ ಆಚಾರ್ಯ, ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು ಚಪ್ಪರ ಉದ್ಘಾಟನೆಯಧಾರ್ಮಿಕ ವಿಧಿವಿಧಾನ ದೇವಸ್ಥಾನದ ಅರ್ಚಕರಾದ ಸುನಿಲ್ ಭಟ್ ನೆರವೇರಿಸಿದರು.

ಭಜನಾ ಕಾರ್ಯಕ್ರಮ ಉದ್ಘಾಟನೆ :

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮೊದಲ ದಿನ ಇಂದು ಶ್ರೀ ದುರ್ಗಾಪರಮೇಶ್ವರಿ ಪ್ರದಾನ ವೇದಿಕೆಯಲ್ಲಿ ಭಜನಾ ಕಾರ್ಯಕ್ರಮ ಉದ್ಘಾಟನೆ ನೆರವೇರಿತು
ಈ ಭಜನಾ ಕಾರ್ಯಕ್ರದ ಉದ್ಘಾಟನೆ ಮಧ್ವಾದೀಶ ವಿಠಲದಾಸ ನಾಮಾಂಕಿತ ಭಜನಾ ಸಂಪನ್ಮೂಲ ವ್ಯಕ್ತಿಗಳಾದ ರಾಮಕೃಷ್ಣ ಕಾಟುಕುಕ್ಕೆ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.


ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬಿಕೆ ಧನಂಜಯ ರಾವ್, ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ಕೋಶಾಧಿಕಾರಿ ವಾಸುದೇವ ರಾವ್ ಕಕ್ಕೆನೇಜಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಬಿಕೆ ಲೋಕೇಶ್ ರಾವ್, ವ್ಯವಸ್ಥಾಪನಾ ಸಮಿತಿ ಆಡಳಿತಾಧಿಕಾರಿ ಮೋಹನ್ ಬಂಗೇರ, ಭಜನಾ ಸಮಿತಿಯ ಸಂಚಾಲಕರಾದ ಗಣೇಶ್ ಗೌಡ ಪಗರೆ, ಉಪಸ್ಥಿತರಿದ್ದರು.

Related posts

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!