ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ :ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮೊದಲ ದಿನ ಇಂದು ದೇವಸ್ಥಾನದಲ್ಲಿ ಚಪ್ಪರ ಉದ್ಘಾಟನೆ ನೆರವೇರಿತು.

ಚಪ್ಪರ ಉದ್ಘಾಟನೆಯನ್ನು ಯು. ಗೋಪಾಲಕೃಷ್ಣ ಗೌಡ , ವಳಂಬ್ರ ಆಲಂಗಾವು ಇವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಬಿ.ಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಲೋಕೇಶ್ ರಾವ್, ಚಪ್ಪರ ಸಮಿತಿಯ ಸಂಚಾಲಕರಾದ ಕೇಶವ ಎಮ್.ಕೆ ಗೌರವ ಸಲಹೆಗಾರರಾದ ರಾಜು ದಿಡುಪೆ, ಆನಂದ ಆಚಾರ್ಯ, ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು ಚಪ್ಪರ ಉದ್ಘಾಟನೆಯಧಾರ್ಮಿಕ ವಿಧಿವಿಧಾನ ದೇವಸ್ಥಾನದ ಅರ್ಚಕರಾದ ಸುನಿಲ್ ಭಟ್ ನೆರವೇರಿಸಿದರು.

ಭಜನಾ ಕಾರ್ಯಕ್ರಮ ಉದ್ಘಾಟನೆ :

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮೊದಲ ದಿನ ಇಂದು ಶ್ರೀ ದುರ್ಗಾಪರಮೇಶ್ವರಿ ಪ್ರದಾನ ವೇದಿಕೆಯಲ್ಲಿ ಭಜನಾ ಕಾರ್ಯಕ್ರಮ ಉದ್ಘಾಟನೆ ನೆರವೇರಿತು
ಈ ಭಜನಾ ಕಾರ್ಯಕ್ರದ ಉದ್ಘಾಟನೆ ಮಧ್ವಾದೀಶ ವಿಠಲದಾಸ ನಾಮಾಂಕಿತ ಭಜನಾ ಸಂಪನ್ಮೂಲ ವ್ಯಕ್ತಿಗಳಾದ ರಾಮಕೃಷ್ಣ ಕಾಟುಕುಕ್ಕೆ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.


ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬಿಕೆ ಧನಂಜಯ ರಾವ್, ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ಕೋಶಾಧಿಕಾರಿ ವಾಸುದೇವ ರಾವ್ ಕಕ್ಕೆನೇಜಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಬಿಕೆ ಲೋಕೇಶ್ ರಾವ್, ವ್ಯವಸ್ಥಾಪನಾ ಸಮಿತಿ ಆಡಳಿತಾಧಿಕಾರಿ ಮೋಹನ್ ಬಂಗೇರ, ಭಜನಾ ಸಮಿತಿಯ ಸಂಚಾಲಕರಾದ ಗಣೇಶ್ ಗೌಡ ಪಗರೆ, ಉಪಸ್ಥಿತರಿದ್ದರು.

Related posts

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!