22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪೆರಿಂಜೆ: ಪಡ್ಡ್ಯಾರಬೆಟ್ಟ ದೈವಸ್ಥಾನ ಕ್ಷೇತ್ರ ವಾರ್ಷಿಕ ಜಾತ್ರೋತ್ಸವ ಸಂಪನ್ನ, ಸಾಧಕರಿಗೆ ಗೌರವ, ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ, : ಪೆರಿಂಜೆ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಮಂಗಳವಾರ ರಾತ್ರಿ ನಡೆದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಧಕರನ್ನು ಸಮ್ಮಾನಿಸಲಾಯಿತು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ವೇಣೂರಿನಲ್ಲಿ ವೈದ್ಯರಾಗಿ, 38 ವರ್ಷಗಳಿಂದ ಬಡಜನತೆಗೆ ಸೇವೆ ನೀಡುತ್ತಾ ಬಂದಿರುವ ಡಾ.ಕೆ.ಎನ್. ರವೀಂದ್ರ ಪ್ರಸಾದ್ ಬಡಕೋಡಿಗುತ್ತು, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾ‌ನ ಆಡಳಿತ ಮೊಕ್ತೇಸರ, ಸಹಕಾರಿ ಕ್ಷೇತ್ರ, ಗ್ರಾ.ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ ವೇಣೂರು ಕರಿಮಣೇಲು ಖಂಡಿಗ ಜಯರಾಮ್ ಶೆಟ್ಟಿ, ಮತ್ತುರಾಜಕೀಯ, ಸಾಮಾಜಿಕ, ಸಹಕಾರಿ ಕ್ಷೇತ್ರದ ಸಾಧನೆಗಾಗಿ ಪೆರಾಡಿ ಸತೀಶ್ ಕಾಶಿಪಟ್ಣ ಇವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ಗೌರವ ಸ್ವೀಕರಿಸಿದ ಸತೀಶ್ ಕಾಶಿಪಟ್ನ ಮಾತನಾಡಿ ಪಡ್ಯಾರ ಬೆಟ್ಟು ಕ್ಷೇತ್ರದ ದೈವಗಳು ಅವರೆ ದೇವರು ಅವರೆ.ಸಹಸ್ರಾರು ಭಕ್ತಾದಿಗಳಿಗೆ ಅಭಯನೀಡುವ ಶ್ರಿ ಕೊಡಮಣಿತ್ತಾಯ ಸನ್ನಿಧಿಯಲ್ಲಿ ಗೌರವ ಸ್ವಿಕರಿಸುವುದು ಎಂದರೆ ದೇವರ ಅನುಗ್ರಹ ಪಡೆದಂತೆ. ಇಲ್ಲಿನ ಆಡಳಿತ ಮೊಕ್ತೆಸರರಾದ ಜೀವಂದರ್ ಕುಮಾರ್ ರವರು ಮಗುವಿನಂತ ಮನಸ್ಸಿನವರು.ಕ್ಷೇತ್ರದ ಸಾನಿದ್ಯವನ್ನು ಹೆಚ್ಚಿಸಿದವರು.ಭಕ್ತರನ್ನು ಪ್ರೀತಿಯಿಂದ ಕಾಣುವ ಇವರು ಎಲ್ಲರೊಂದಿಗೆ ಮುಕ್ತವಾಗಿ ,ಗೌರವಯುತವಾಗಿ ನಡೆಯುವವರು.ಇವರ ಪ್ರೀತಿಯ ಗೌರವ ಪಡೆಯುವುದು ಪೂರ್ವ ಜನ್ಮದ ಪುಣ್ಯದ ಫಲ ಎಂದರು.ಡಾ ಕೆ ಎನ್ ರವೀಂದ್ರ ಪ್ರಸಾದ್ ಸನ್ಮಾನ ಸ್ವೀಕರಿಸಿ ಮಾತನಾಡಿ ಪ್ರತಿಯೊಬ್ಬರು ದೈವ ದೇವರಲ್ಲಿ ಭಕ್ತಿ ನಂಬಿಕೆ ಇಡುವ ಜೊತೆ ತಮ್ಮ ಅರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಹಿರಿಯರ ಅಹಾರ ಪದ್ದತಿಯೇ ಶ್ರೇಷ್ಠ ಅದನ್ನೆ ಪಾಲಿಸಬೇಕು ಎಂದರು.ಇದೇ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು‌.

ಅನುವಂಶೀಯ ಆಡಳಿತ ಮೊಕ್ತೇಸರಎ.ಜೀವಂದರ್ ಕುಮಾರ್, ಪತ್ನಿಸುಲೋಚನಾ, ಪುತ್ರರಾದ ವಿಕಾಸ್ ಜೈನ್, ವಿಶ್ವಾಸ್ ಜೈನ್ ,ಕ್ಷೇತ್ರದ ಪ್ರದಾನ ಅರ್ಚಕ ರಾಮದಾಸ ಅಸ್ರಣ್ಣ ಅವರಿಂದ ಸಮ್ಮಾನ ಕಾರ್ಯಕ್ರಮ ನೆರವೇರಿತು.ಪ್ರವೀಣ್ ಮೂಡುಕೋಡಿ ಅವರು ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ದೈವದ,ಕುರುಸಂಬಿಲ ನೇಮೋತ್ಸವ ನಡೆಯಿತು.

Related posts

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya
error: Content is protected !!