22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಕಳೆದ 78 ವರ್ಷಗಳಿಂದ ಮುಳಿಯ ಸಂಸ್ಥೆಯು ಕರಿಮಣಿ ಉತ್ಸವ, ಡೈಮಂಡ್, ಬಲೆ, ನೆಕ್ಲೇಸ್ ಹಬ್ಬ ನಡೆಸಿ ಗ್ರಾಹಕರಿಗೆ ನಗುಮೊಗದ ಸೇವೆ ನೀಡುವ ಮೂಲಕ ಪ್ರಸಿದ್ದಿಯನ್ನು ಪಡೆದಿದೆ. ಬೆಳೆಯುತ್ತಿರುವ ಉಜಿರೆಯಲ್ಲಿ ಮುಳಿಯದ ಇನ್ನೊಂದು ಶಾಖೆ ಪ್ರಾರಂಭಿಸಿ ಎಂದು ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಪಬ್ಲಿಕ್ ರಿಲೇಶನ್ಸ್ ಆಫೀಸರ್ ಎಸ್.ಜಿ. ಭಟ್ ಹೇಳಿದರು.

ಅವರು ಮಾ.20 ರಂದು ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಪೆಸ್ಟ್ ಉದ್ಘಾಟಿಸಿ ಮಾತನಾಡಿದರು.

ಕಿರುತೆರೆ ಕಲಾವಿದೆ ದೀಪ ಕಟ್ಟೆ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ ಚಿನ್ನಾಭರಣಗಳ ಪರಿಶುದ್ದತೆ ಮತ್ತು ನಂಬಿಕೆಗೆ ಇನ್ನೊಂದು ಹೆಸರು ಮುಳಿಯ ಸಂಸ್ಥೆ. ಮುಳಿಯದಲ್ಲಿ ಉತ್ತಮವಾದ ಕಲೆಕ್ಷನ್ ಮತ್ತು ಡಿಸೈನ್ ಇದೆ, ಗ್ರಾಹಕರಿಗೆ ಆಭರಣದ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿದೆ ಎಂದರು.

ವೇದಿಕೆಯಲ್ಲಿ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಶಿವಕೃಷ್ಣ ಮೂರ್ತಿ, ಪ್ರೊಡೆಕ್ಟ್ ಮ್ಯಾನೇಜರ್ ಪ್ರಶಾಂತ್ ಎಸ್ ಉಪಸ್ಥಿತರಿದ್ದರು.

ಸಿಬ್ವಂದಿ ಜಯಲಕ್ಷ್ಮಿ ಪ್ರಾರ್ಥಿಸಿ, ಶಾಖಾ ಪ್ರಬಂಧಕ ಅಶೋಕ್ ಬಂಗೇರ ಸ್ವಾಗತಿಸಿದರು. ಉಪಶಾಖ ಪ್ರಬಂಧಕ ಲೋಹಿತ್ ವಂದಿಸಿದರು. ಪ್ರಜ್ಞಾ ಓಡಿಲ್ನಾಳ ನಿರೂಪಿಸಿದರು. ಮುಳಿಯ ಜುವೆಲ್ಸ್ ಸಿಬ್ಬಂದಿಗಳು ಸಹಕರಿಸಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ದ ಜಾಗೃತಿ ಸಭೆ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!