25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

ಅಳದಂಗಡಿ: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಮಾ.26ರಿಂದ ಮಾ.28 ರವರೆಗೆ 77ನೇ ವರ್ಷದ ವಾರ್ಷಿಕ ನೇಮೋತ್ಸವವು ಜರಗಲಿರುವುದು.

ಮಾರ್ಚ್ 26ರಂದು ಬೆಳಿಗ್ಗೆ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಿಂದ ತೀರ್ಥ ತರುವುದು. ದೈವಗಳ ಭಂಡಾರ ಶುದ್ಧೀಕರಿಸಿ ಗಣಹೋಮ, ಅಂಗತ್ಯಾರು ಬಾಕಿಮಾರು ಗದ್ದೆಯಲ್ಲಿ ಮುಗೇರ ದೈವಗಳಿಗೆ ಮಂಜ ಸೇವೆಯು ನಡೆಯಲಿರುವುದು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಾಂಜೆ ಕುಡ್ಡಲಬೆಟ್ಟು ದೈವಸ್ಥಾನದಿಂದ ದೈವಗಳ ಭಂಡಾರ ಬರುವುದು, ಓಂಕಾರೇಶ್ವರ ಭಜನಾ ಮಂಡಳಿ ಪಜಿರಡ್ಕ ಕಲ್ಮಂಜ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ನೆಲ್ಯರಾಯ ಪಂಜುರ್ಲಿ ನೇಮೋತ್ಸವ, ರಾತ್ರಿ12 ಕ್ಕೆ ಮಹಾಕಾಳಿ ದೈವದ ನೇಮೋತ್ಸವ ನಡೆಯಲಿರುವುದು. ಮಾ. 27ರಂದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಬ್ರಹ್ಮ ಮೊಗೇರ ದೈವಗಳ ನೇಮೋತ್ಸವ, ರಾತ್ರಿ 12 ಕ್ಕೆ ತಂಗಡಿ ತನ್ನಿ ಮಾಣಿಗ ದೈವದ ನೇಮೋತ್ಸವ ಜರುಗಲಿರುವುದು.

ಮಾರ್ಚ್ 28ರಂದು ಬೆಳಿಗ್ಗೆ ಅಲೇರ ಪಂಜುರ್ಲಿ ದೈವದ ನೇಮೋತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ, ಸಂಜೆ ದೈವಗಳ ಭಂಡಾರ ಇಳಿಯುವುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya
error: Content is protected !!