27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

ರೆಖ್ಯ: ರೆಖ್ಯದ ಬೀಡು ನಿವಾಸಿ ಬಾಲಕೃಷ್ಣ ಗೌಡ ಅವರು ತೋಟಕ್ಕೆ ಹೋಗಿದ್ದ ಸಮಯದಲ್ಲಿ ಬೋರ್‌ವೆಲ್ ವಿಷಯವಾಗಿ ಮಾತುಕತೆ ನಡೆಯುತ್ತಿರುವ ಸಂದರ್ಭ ಗಂಗಾಧರ ಎಂಬವರು ಬಾಲಕೃಷ್ಣ ಗೌಡ ರವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದರೆಂದು ಆರೋಪಿಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೃಷಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಬಾಲಕೃಷ್ಣರವರು ತಮ್ಮ ಸುರೇಶ್ ಎಂಬವರಿಗೆ ರೆಖ್ಯ ಗ್ರಾಮದ ದೇವಸ ಎಂಬಲ್ಲಿರುವ ಸುಮಾರು 2 ಎಕರೆ ಜಾಗದಲ್ಲಿ ತಂದೆ-ತಾಯಿ, ತಮ್ಮ ಒಟ್ಟಿಗೆ ಹಳೆ ಮನೆಯಲ್ಲಿ ಇದ್ದೇವೆ. ಇತ್ತೀಚಿಗೆ ಹೊಸಮನೆ ನಿರ್ಮಾಣದ ಕೆಲಸ ಆಗುತ್ತಿದ್ದು, ಈ ಬಗ್ಗೆ ನಾನು ನಿನ್ನೆ ದಿನ ರಾತ್ರಿ 10 ಗಂಟೆಗೆ ಮನೆಯ ಕೆಲಸದ ಬಗ್ಗೆ ಹೋದಾಗ, ತಮ್ಮನ ಜಾಗದ ಬದಿಯಲ್ಲಿ ಭವಾನಿ ಎಂಬವರು ಬೋರ್‌ವೆಲ್ ಕೊರೆಯುತ್ತಿದ್ದರು.

ಈ ಬಗ್ಗೆ ಅಲ್ಲಿಯ ಸ್ಥಳಿಯ ಪಂ. ಸದಸ್ಯರಾದ ನಾಗೇಶ್ ಎಂಬುವರು, ಯಾಕೆ ಬೋರ್‌ವೆಲ್ ಕೊರೆಯುವುದು ಎಂದು ಅವರೊಳಗೆ ಮಾತುಕತೆಯಾಗುತ್ತಿತ್ತು. ಆ ಸಮಯ ನಾನು ಯಾಕೆ ಮಾತನಾಡುವುದು ಅವರು ಪಾಪದವರು ಬೋರ್‌ವೆಲ್ ತೆಗೆಯಲಿ ಎಂದು ಹೇಳಿದಾಗ ಕೋಪಗೊಂಡ ಗಂಗಾಧರ ಬಂದು, ಬೈದು ಕೈಯಿಂದ ಹಲ್ಲೆ ನಡೆಸಿದರೆಂದು ಆರೋಪಿಸಿದ್ದಾರೆ, ಪೊಲೀಸರು ದೂರು ಸ್ವೀಕರಿಸಿದ್ದಾರೆ.

Related posts

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya
error: Content is protected !!