25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

ರೆಖ್ಯ: ರೆಖ್ಯದ ಬೀಡು ನಿವಾಸಿ ಬಾಲಕೃಷ್ಣ ಗೌಡ ಅವರು ತೋಟಕ್ಕೆ ಹೋಗಿದ್ದ ಸಮಯದಲ್ಲಿ ಬೋರ್‌ವೆಲ್ ವಿಷಯವಾಗಿ ಮಾತುಕತೆ ನಡೆಯುತ್ತಿರುವ ಸಂದರ್ಭ ಗಂಗಾಧರ ಎಂಬವರು ಬಾಲಕೃಷ್ಣ ಗೌಡ ರವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದರೆಂದು ಆರೋಪಿಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೃಷಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಬಾಲಕೃಷ್ಣರವರು ತಮ್ಮ ಸುರೇಶ್ ಎಂಬವರಿಗೆ ರೆಖ್ಯ ಗ್ರಾಮದ ದೇವಸ ಎಂಬಲ್ಲಿರುವ ಸುಮಾರು 2 ಎಕರೆ ಜಾಗದಲ್ಲಿ ತಂದೆ-ತಾಯಿ, ತಮ್ಮ ಒಟ್ಟಿಗೆ ಹಳೆ ಮನೆಯಲ್ಲಿ ಇದ್ದೇವೆ. ಇತ್ತೀಚಿಗೆ ಹೊಸಮನೆ ನಿರ್ಮಾಣದ ಕೆಲಸ ಆಗುತ್ತಿದ್ದು, ಈ ಬಗ್ಗೆ ನಾನು ನಿನ್ನೆ ದಿನ ರಾತ್ರಿ 10 ಗಂಟೆಗೆ ಮನೆಯ ಕೆಲಸದ ಬಗ್ಗೆ ಹೋದಾಗ, ತಮ್ಮನ ಜಾಗದ ಬದಿಯಲ್ಲಿ ಭವಾನಿ ಎಂಬವರು ಬೋರ್‌ವೆಲ್ ಕೊರೆಯುತ್ತಿದ್ದರು.

ಈ ಬಗ್ಗೆ ಅಲ್ಲಿಯ ಸ್ಥಳಿಯ ಪಂ. ಸದಸ್ಯರಾದ ನಾಗೇಶ್ ಎಂಬುವರು, ಯಾಕೆ ಬೋರ್‌ವೆಲ್ ಕೊರೆಯುವುದು ಎಂದು ಅವರೊಳಗೆ ಮಾತುಕತೆಯಾಗುತ್ತಿತ್ತು. ಆ ಸಮಯ ನಾನು ಯಾಕೆ ಮಾತನಾಡುವುದು ಅವರು ಪಾಪದವರು ಬೋರ್‌ವೆಲ್ ತೆಗೆಯಲಿ ಎಂದು ಹೇಳಿದಾಗ ಕೋಪಗೊಂಡ ಗಂಗಾಧರ ಬಂದು, ಬೈದು ಕೈಯಿಂದ ಹಲ್ಲೆ ನಡೆಸಿದರೆಂದು ಆರೋಪಿಸಿದ್ದಾರೆ, ಪೊಲೀಸರು ದೂರು ಸ್ವೀಕರಿಸಿದ್ದಾರೆ.

Related posts

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!