23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

ರೆಖ್ಯ: ರೆಖ್ಯದ ಬೀಡು ನಿವಾಸಿ ಬಾಲಕೃಷ್ಣ ಗೌಡ ಅವರು ತೋಟಕ್ಕೆ ಹೋಗಿದ್ದ ಸಮಯದಲ್ಲಿ ಬೋರ್‌ವೆಲ್ ವಿಷಯವಾಗಿ ಮಾತುಕತೆ ನಡೆಯುತ್ತಿರುವ ಸಂದರ್ಭ ಗಂಗಾಧರ ಎಂಬವರು ಬಾಲಕೃಷ್ಣ ಗೌಡ ರವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದರೆಂದು ಆರೋಪಿಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೃಷಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಬಾಲಕೃಷ್ಣರವರು ತಮ್ಮ ಸುರೇಶ್ ಎಂಬವರಿಗೆ ರೆಖ್ಯ ಗ್ರಾಮದ ದೇವಸ ಎಂಬಲ್ಲಿರುವ ಸುಮಾರು 2 ಎಕರೆ ಜಾಗದಲ್ಲಿ ತಂದೆ-ತಾಯಿ, ತಮ್ಮ ಒಟ್ಟಿಗೆ ಹಳೆ ಮನೆಯಲ್ಲಿ ಇದ್ದೇವೆ. ಇತ್ತೀಚಿಗೆ ಹೊಸಮನೆ ನಿರ್ಮಾಣದ ಕೆಲಸ ಆಗುತ್ತಿದ್ದು, ಈ ಬಗ್ಗೆ ನಾನು ನಿನ್ನೆ ದಿನ ರಾತ್ರಿ 10 ಗಂಟೆಗೆ ಮನೆಯ ಕೆಲಸದ ಬಗ್ಗೆ ಹೋದಾಗ, ತಮ್ಮನ ಜಾಗದ ಬದಿಯಲ್ಲಿ ಭವಾನಿ ಎಂಬವರು ಬೋರ್‌ವೆಲ್ ಕೊರೆಯುತ್ತಿದ್ದರು.

ಈ ಬಗ್ಗೆ ಅಲ್ಲಿಯ ಸ್ಥಳಿಯ ಪಂ. ಸದಸ್ಯರಾದ ನಾಗೇಶ್ ಎಂಬುವರು, ಯಾಕೆ ಬೋರ್‌ವೆಲ್ ಕೊರೆಯುವುದು ಎಂದು ಅವರೊಳಗೆ ಮಾತುಕತೆಯಾಗುತ್ತಿತ್ತು. ಆ ಸಮಯ ನಾನು ಯಾಕೆ ಮಾತನಾಡುವುದು ಅವರು ಪಾಪದವರು ಬೋರ್‌ವೆಲ್ ತೆಗೆಯಲಿ ಎಂದು ಹೇಳಿದಾಗ ಕೋಪಗೊಂಡ ಗಂಗಾಧರ ಬಂದು, ಬೈದು ಕೈಯಿಂದ ಹಲ್ಲೆ ನಡೆಸಿದರೆಂದು ಆರೋಪಿಸಿದ್ದಾರೆ, ಪೊಲೀಸರು ದೂರು ಸ್ವೀಕರಿಸಿದ್ದಾರೆ.

Related posts

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya
error: Content is protected !!