September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

ರೆಖ್ಯ: ರೆಖ್ಯದ ಬೀಡು ನಿವಾಸಿ ಬಾಲಕೃಷ್ಣ ಗೌಡ ಅವರು ತೋಟಕ್ಕೆ ಹೋಗಿದ್ದ ಸಮಯದಲ್ಲಿ ಬೋರ್‌ವೆಲ್ ವಿಷಯವಾಗಿ ಮಾತುಕತೆ ನಡೆಯುತ್ತಿರುವ ಸಂದರ್ಭ ಗಂಗಾಧರ ಎಂಬವರು ಬಾಲಕೃಷ್ಣ ಗೌಡ ರವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದರೆಂದು ಆರೋಪಿಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೃಷಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಬಾಲಕೃಷ್ಣರವರು ತಮ್ಮ ಸುರೇಶ್ ಎಂಬವರಿಗೆ ರೆಖ್ಯ ಗ್ರಾಮದ ದೇವಸ ಎಂಬಲ್ಲಿರುವ ಸುಮಾರು 2 ಎಕರೆ ಜಾಗದಲ್ಲಿ ತಂದೆ-ತಾಯಿ, ತಮ್ಮ ಒಟ್ಟಿಗೆ ಹಳೆ ಮನೆಯಲ್ಲಿ ಇದ್ದೇವೆ. ಇತ್ತೀಚಿಗೆ ಹೊಸಮನೆ ನಿರ್ಮಾಣದ ಕೆಲಸ ಆಗುತ್ತಿದ್ದು, ಈ ಬಗ್ಗೆ ನಾನು ನಿನ್ನೆ ದಿನ ರಾತ್ರಿ 10 ಗಂಟೆಗೆ ಮನೆಯ ಕೆಲಸದ ಬಗ್ಗೆ ಹೋದಾಗ, ತಮ್ಮನ ಜಾಗದ ಬದಿಯಲ್ಲಿ ಭವಾನಿ ಎಂಬವರು ಬೋರ್‌ವೆಲ್ ಕೊರೆಯುತ್ತಿದ್ದರು.

ಈ ಬಗ್ಗೆ ಅಲ್ಲಿಯ ಸ್ಥಳಿಯ ಪಂ. ಸದಸ್ಯರಾದ ನಾಗೇಶ್ ಎಂಬುವರು, ಯಾಕೆ ಬೋರ್‌ವೆಲ್ ಕೊರೆಯುವುದು ಎಂದು ಅವರೊಳಗೆ ಮಾತುಕತೆಯಾಗುತ್ತಿತ್ತು. ಆ ಸಮಯ ನಾನು ಯಾಕೆ ಮಾತನಾಡುವುದು ಅವರು ಪಾಪದವರು ಬೋರ್‌ವೆಲ್ ತೆಗೆಯಲಿ ಎಂದು ಹೇಳಿದಾಗ ಕೋಪಗೊಂಡ ಗಂಗಾಧರ ಬಂದು, ಬೈದು ಕೈಯಿಂದ ಹಲ್ಲೆ ನಡೆಸಿದರೆಂದು ಆರೋಪಿಸಿದ್ದಾರೆ, ಪೊಲೀಸರು ದೂರು ಸ್ವೀಕರಿಸಿದ್ದಾರೆ.

Related posts

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21 ರಂದು ಕೆ.ಎಸ್.ಎಂ.ಸಿ.ಎ ವತಿಯಿಂದ ಬೆಳ್ತಂಗಡಿಯಲ್ಲಿ ಮೆರವಣಿಗೆ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!