September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

ನೆರಿಯ: ಸಿಯೋನ್ ಆಶ್ರಮವು ಕಳೆದ 25 ವರ್ಷಗಳಿಂದ ಅಶಕ್ತ, ಅನಾಥ ಮತ್ತು ವಿಶೇಷಚೇತನರನ್ನು ಯಾವುದೇ ಜಾತಿ- ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆ ಮಾಡುತ್ತಾ ಬಂದಿರುತ್ತದೆ. ಮಾ.22ರಂದು ಸಿಯೋನ್ ಆಶ್ರಮವು ತನ್ನ ಸೇವೆಯ 25 ಸಂವತ್ಸರಗಳನ್ನು ಪೂರ್ಣಗೊಳಿಸಿರುತ್ತದೆ. ಈ ಸಂದರ್ಭದಲ್ಲಿ “ಸಿಯೋನ್ ರಜತಮಹೋತ್ಸವ ಮತ್ತು ಕರ್ನಾಟಕ ಸುವರ್ಣ ಸಂಭ್ರಮ”ವನ್ನು ಜಂಟಿಯಾಗಿ ಆಚರಿಸಲು ಮಾ.21 ಮತ್ತು ಮಾ.22 ರಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಲೋಕಸಭೆ ಚುನಾವಣೆಯ ಪ್ರಯುಕ್ತ ಚುನಾವಣಾ ಆಯೋಗವು ಕಟ್ಟುನಿಟ್ಟಿನ ನೀತಿಸಂಹಿತೆ ಜಾರಿಗೊಳಿಸಿದೆ. ಆದುದರಿಂದ “ಸಿಯೋನ್ ಬೆಳ್ಳಿಹಬ್ಬ” ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯಾತಿಗಣ್ಯರಿಗೆ ಬರಲು ಅನಾನುಕೂಲವಾಗುವುದರಿಂದ ನಿಗದಿಪಡಿಸಲಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಿಯೋನ್ ಆಶ್ರಮದ ಮಾನೇಜಿಂಗ್ ಟ್ರಸ್ಟಿ ಯುಸಿ ಪೌಲೋಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರಿಮಣೇಲು : ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಕೆ. ಹೇಮರಾಜ್ ರವರಿಂದ ತಿಮ್ಮಣಬೆಟ್ಟು ಸ.ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!