23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

ನೆರಿಯ: ಸಿಯೋನ್ ಆಶ್ರಮವು ಕಳೆದ 25 ವರ್ಷಗಳಿಂದ ಅಶಕ್ತ, ಅನಾಥ ಮತ್ತು ವಿಶೇಷಚೇತನರನ್ನು ಯಾವುದೇ ಜಾತಿ- ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆ ಮಾಡುತ್ತಾ ಬಂದಿರುತ್ತದೆ. ಮಾ.22ರಂದು ಸಿಯೋನ್ ಆಶ್ರಮವು ತನ್ನ ಸೇವೆಯ 25 ಸಂವತ್ಸರಗಳನ್ನು ಪೂರ್ಣಗೊಳಿಸಿರುತ್ತದೆ. ಈ ಸಂದರ್ಭದಲ್ಲಿ “ಸಿಯೋನ್ ರಜತಮಹೋತ್ಸವ ಮತ್ತು ಕರ್ನಾಟಕ ಸುವರ್ಣ ಸಂಭ್ರಮ”ವನ್ನು ಜಂಟಿಯಾಗಿ ಆಚರಿಸಲು ಮಾ.21 ಮತ್ತು ಮಾ.22 ರಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಲೋಕಸಭೆ ಚುನಾವಣೆಯ ಪ್ರಯುಕ್ತ ಚುನಾವಣಾ ಆಯೋಗವು ಕಟ್ಟುನಿಟ್ಟಿನ ನೀತಿಸಂಹಿತೆ ಜಾರಿಗೊಳಿಸಿದೆ. ಆದುದರಿಂದ “ಸಿಯೋನ್ ಬೆಳ್ಳಿಹಬ್ಬ” ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯಾತಿಗಣ್ಯರಿಗೆ ಬರಲು ಅನಾನುಕೂಲವಾಗುವುದರಿಂದ ನಿಗದಿಪಡಿಸಲಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಿಯೋನ್ ಆಶ್ರಮದ ಮಾನೇಜಿಂಗ್ ಟ್ರಸ್ಟಿ ಯುಸಿ ಪೌಲೋಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya
error: Content is protected !!