July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ದೊರೆತಿದೆ ಕಾಡಿಗೆ ಹುಳಿ ಕೊಯ್ಯಲೆಂದು ತೆರಳಿದವರಿಗೆ ತಲೆ ಬುರುಡೆ ಮತ್ತು ಎಲುಬು ಮಾತ್ರ ಇರುವ ಶವ ಕಾಣಸಿಕ್ಕಿದು ಹತ್ತಿರದಲ್ಲಿ ಬ್ಯಾಗ್, ಮದ್ಯದ ಬಾಟಲಿ, ನೀರಿನ ಬಾಟಲಿ ದೊರೆತಿದೆ.

ಬ್ಯಾಗ್ ನಲ್ಲಿ ಆಧಾರ್ ಕಾರ್ಡ್ ದೊರೆತಿದ್ದು ಅದರಲ್ಲಿ ರಾಜು ಮಾಣಿಂಗೇರಿ ಕಾಯರ್ತಡ್ಕ ಎಂದಿದ್ದು ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಪೊಲೀಸರು ರಾಜುವಿನ ಪುತ್ರನನ್ನು ಸ್ಥಳಕ್ಕೆ ಕರೆಸಿದ್ದು ಶವ ರಾಜುವವರದ್ದೆ ಎಂದು ಗುರುತು ಹಿಡಿದಿದ್ದಾರೆ. ರಾಜು ಮೃತ ಪಡಲು ಸ್ಪಷ್ಟ ಕಾರಣ ತನಿಖೆಯಿಂದ ತಿಳಿದು ಬರಬೇಕಾಗಿದೆ.ಶವವದ ಅವಶೇಷಗಳನ್ನು ಡಿ.ಎನ್.ಎ ಪರೀಕ್ಷೆ ಗೆ ಒಳಪಡಿಸುವ ಸಾಧ್ಯತೆಗಳ‌ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಗಳನ್ನು ಕೈಗೊಂಡಿದ್ದಾರೆ.

Related posts

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya
error: Content is protected !!