September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ದೊರೆತಿದೆ ಕಾಡಿಗೆ ಹುಳಿ ಕೊಯ್ಯಲೆಂದು ತೆರಳಿದವರಿಗೆ ತಲೆ ಬುರುಡೆ ಮತ್ತು ಎಲುಬು ಮಾತ್ರ ಇರುವ ಶವ ಕಾಣಸಿಕ್ಕಿದು ಹತ್ತಿರದಲ್ಲಿ ಬ್ಯಾಗ್, ಮದ್ಯದ ಬಾಟಲಿ, ನೀರಿನ ಬಾಟಲಿ ದೊರೆತಿದೆ.

ಬ್ಯಾಗ್ ನಲ್ಲಿ ಆಧಾರ್ ಕಾರ್ಡ್ ದೊರೆತಿದ್ದು ಅದರಲ್ಲಿ ರಾಜು ಮಾಣಿಂಗೇರಿ ಕಾಯರ್ತಡ್ಕ ಎಂದಿದ್ದು ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಪೊಲೀಸರು ರಾಜುವಿನ ಪುತ್ರನನ್ನು ಸ್ಥಳಕ್ಕೆ ಕರೆಸಿದ್ದು ಶವ ರಾಜುವವರದ್ದೆ ಎಂದು ಗುರುತು ಹಿಡಿದಿದ್ದಾರೆ. ರಾಜು ಮೃತ ಪಡಲು ಸ್ಪಷ್ಟ ಕಾರಣ ತನಿಖೆಯಿಂದ ತಿಳಿದು ಬರಬೇಕಾಗಿದೆ.ಶವವದ ಅವಶೇಷಗಳನ್ನು ಡಿ.ಎನ್.ಎ ಪರೀಕ್ಷೆ ಗೆ ಒಳಪಡಿಸುವ ಸಾಧ್ಯತೆಗಳ‌ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಗಳನ್ನು ಕೈಗೊಂಡಿದ್ದಾರೆ.

Related posts

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕುತ್ಲೂರು ಶಾಲೆಯಲ್ಲಿ ವನಮಹೋತ್ಸವ: ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya
error: Content is protected !!