ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಬೆದ್ರಬೆಟ್ಟು ಮಹಮ್ಮಾಯಿ ನಗರದಿಂದ ಮಾ.20 ರಂದು ಚಾಲನೆ ನೀಡಲಾಯಿತು.


ಹೊರೆ ಕಾಣಿಕೆ ಮೆರವಣಿಗೆಗೆ ಕಿಲ್ಲೂರು ಮನೆತನದ ಬಿ.ಕೆ. ಸಂತೋಷ್ ರಾವ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭಹಾರೈಸಿದರು.


ಬೆದ್ರಬೆಟ್ಟು ಮಹಮ್ಮಾಯಿ ನಗರದಿಂದ ವಾಹನದ ಮೂಲಕ ಸಾಗಿ ಬಂದ ಹಸಿರುವಾಣಿ ಹೊರೆ ಕಾಣಿಕೆ ಕೊಲ್ಲಿ ನೇತ್ರಾವತಿ ತೀರದಿಂದ ಭಜನಾ ತಂಡಗಳ ಜೊತೆಗೂಡಿ ಅತ್ಯಂತ ವಿಜೃಂಭಣೆಯಿಂದ ದೇವಸ್ಥಾನಕ್ಕೆ ಸಾಗಿ ಬಂತು
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಶ್ರೀ ಬಿಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಲೋಕೇಶ್ ರಾವ್, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Leave a Comment

error: Content is protected !!