27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

ಉಜಿರೆ : ರೈತರೇ ಹೆಚ್ಚಾಗಿರುವ ಸಹಕಾರಿ ಸಂಘದ ಸದಸ್ಯರುಗಳಿಗೆ ಸರಕಾರ ನೀಡಿರುವ ಯಶಸ್ವಿನಿ ಯೋಜನೆಯಲ್ಲಿ ಇದೀಗ ಗ್ರಾಮೀಣ ಪ್ರದೇಶದಲ್ಲಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಎನ್ ಸಿ ಜಯರಾಮ್ ಯಶಸ್ವಿನಿ ಯೋಜನೆಯ ಫಲಾನುಭಾವಿಯಾಗಿದ್ದು, ಇವರಿಗೆ ಮಾ.14 ರಂದು ಬಲಕಾಲಿನ ಮೊಣಗಂಟು ಬದಲಿ ಶಸ್ತ್ರಚಿಕಿತ್ಸೆಯು (Total Knee replacement) ಯಶಸ್ವಿನಿ ಯೋಜನೆಯಡಿಯಲ್ಲಿ ಆಗಿದ್ದು, ಮಂಗಳೂರಿನ ಖ್ಯಾತ ಮೂಳೆ ತಜ್ಞರಾದ ಡಾ .ವಿಕ್ರಂ ಶೆಟ್ಟಿ, ಬೆನಕ ಆಸ್ಪತ್ರೆಯ ಎಲುಬು ಮತ್ತು ಮೂಳೆ ತಜ್ಞರಾದ ಡಾ. ರಜತ್, ವೈದ್ಯಕೀಯ ನಿರ್ದೇಶಕರಾದ ಡಾ ಗೋಪಾಲಕೃಷ್ಣರನ್ನು ಒಳಗೊಂಡ ತಂಡ ಈ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿಸಿದರು.

ಈಗ ರೋಗಿಯು ಉತ್ತಮವಾಗಿ ನಡೆಯುತ್ತಿದ್ದಾರೆ. ಯಶಸ್ವಿನಿ ಯೋಜನೆಯು ಗ್ರಾಮೀಣ ರೈತರಿಗೆ ವರದಾನವಾಗಿದೆ. ಅತ್ಯಂತ ಕ್ಲಿಷ್ಟ ಹಾಗೂ ಪಟ್ಟಣ ಪ್ರದೇಶದಲ್ಲಿ ನಡೆಸುವ ಈ ಶಸ್ತ್ರ ಚಿಕಿತ್ಸೆಯು ಇದೀಗ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ನಡೆದಿದ್ದು ಹೆಮ್ಮೆಯ ವಿಷಯ ಎಂದು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಇವರು ಪತ್ರಿಕಾ ಮಾದ್ಯಮಕ್ಕೆ ತಿಳಿಸಿದರು.

Related posts

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya
error: Content is protected !!