24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

ಅಳದಂಗಡಿ: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಮಾ.26ರಿಂದ ಮಾ.28 ರವರೆಗೆ 77ನೇ ವರ್ಷದ ವಾರ್ಷಿಕ ನೇಮೋತ್ಸವವು ಜರಗಲಿರುವುದು.

ಮಾರ್ಚ್ 26ರಂದು ಬೆಳಿಗ್ಗೆ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಿಂದ ತೀರ್ಥ ತರುವುದು. ದೈವಗಳ ಭಂಡಾರ ಶುದ್ಧೀಕರಿಸಿ ಗಣಹೋಮ, ಅಂಗತ್ಯಾರು ಬಾಕಿಮಾರು ಗದ್ದೆಯಲ್ಲಿ ಮುಗೇರ ದೈವಗಳಿಗೆ ಮಂಜ ಸೇವೆಯು ನಡೆಯಲಿರುವುದು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಾಂಜೆ ಕುಡ್ಡಲಬೆಟ್ಟು ದೈವಸ್ಥಾನದಿಂದ ದೈವಗಳ ಭಂಡಾರ ಬರುವುದು, ಓಂಕಾರೇಶ್ವರ ಭಜನಾ ಮಂಡಳಿ ಪಜಿರಡ್ಕ ಕಲ್ಮಂಜ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ನೆಲ್ಯರಾಯ ಪಂಜುರ್ಲಿ ನೇಮೋತ್ಸವ, ರಾತ್ರಿ12 ಕ್ಕೆ ಮಹಾಕಾಳಿ ದೈವದ ನೇಮೋತ್ಸವ ನಡೆಯಲಿರುವುದು. ಮಾ. 27ರಂದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಬ್ರಹ್ಮ ಮೊಗೇರ ದೈವಗಳ ನೇಮೋತ್ಸವ, ರಾತ್ರಿ 12 ಕ್ಕೆ ತಂಗಡಿ ತನ್ನಿ ಮಾಣಿಗ ದೈವದ ನೇಮೋತ್ಸವ ಜರುಗಲಿರುವುದು.

ಮಾರ್ಚ್ 28ರಂದು ಬೆಳಿಗ್ಗೆ ಅಲೇರ ಪಂಜುರ್ಲಿ ದೈವದ ನೇಮೋತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ, ಸಂಜೆ ದೈವಗಳ ಭಂಡಾರ ಇಳಿಯುವುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya
error: Content is protected !!