September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

ಅಳದಂಗಡಿ: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಮಾ.26ರಿಂದ ಮಾ.28 ರವರೆಗೆ 77ನೇ ವರ್ಷದ ವಾರ್ಷಿಕ ನೇಮೋತ್ಸವವು ಜರಗಲಿರುವುದು.

ಮಾರ್ಚ್ 26ರಂದು ಬೆಳಿಗ್ಗೆ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಿಂದ ತೀರ್ಥ ತರುವುದು. ದೈವಗಳ ಭಂಡಾರ ಶುದ್ಧೀಕರಿಸಿ ಗಣಹೋಮ, ಅಂಗತ್ಯಾರು ಬಾಕಿಮಾರು ಗದ್ದೆಯಲ್ಲಿ ಮುಗೇರ ದೈವಗಳಿಗೆ ಮಂಜ ಸೇವೆಯು ನಡೆಯಲಿರುವುದು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಾಂಜೆ ಕುಡ್ಡಲಬೆಟ್ಟು ದೈವಸ್ಥಾನದಿಂದ ದೈವಗಳ ಭಂಡಾರ ಬರುವುದು, ಓಂಕಾರೇಶ್ವರ ಭಜನಾ ಮಂಡಳಿ ಪಜಿರಡ್ಕ ಕಲ್ಮಂಜ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ನೆಲ್ಯರಾಯ ಪಂಜುರ್ಲಿ ನೇಮೋತ್ಸವ, ರಾತ್ರಿ12 ಕ್ಕೆ ಮಹಾಕಾಳಿ ದೈವದ ನೇಮೋತ್ಸವ ನಡೆಯಲಿರುವುದು. ಮಾ. 27ರಂದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಬ್ರಹ್ಮ ಮೊಗೇರ ದೈವಗಳ ನೇಮೋತ್ಸವ, ರಾತ್ರಿ 12 ಕ್ಕೆ ತಂಗಡಿ ತನ್ನಿ ಮಾಣಿಗ ದೈವದ ನೇಮೋತ್ಸವ ಜರುಗಲಿರುವುದು.

ಮಾರ್ಚ್ 28ರಂದು ಬೆಳಿಗ್ಗೆ ಅಲೇರ ಪಂಜುರ್ಲಿ ದೈವದ ನೇಮೋತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ, ಸಂಜೆ ದೈವಗಳ ಭಂಡಾರ ಇಳಿಯುವುದು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya
error: Content is protected !!