23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

ನೆರಿಯ: ಸಿಯೋನ್ ಆಶ್ರಮವು ಕಳೆದ 25 ವರ್ಷಗಳಿಂದ ಅಶಕ್ತ, ಅನಾಥ ಮತ್ತು ವಿಶೇಷಚೇತನರನ್ನು ಯಾವುದೇ ಜಾತಿ- ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆ ಮಾಡುತ್ತಾ ಬಂದಿರುತ್ತದೆ. ಮಾ.22ರಂದು ಸಿಯೋನ್ ಆಶ್ರಮವು ತನ್ನ ಸೇವೆಯ 25 ಸಂವತ್ಸರಗಳನ್ನು ಪೂರ್ಣಗೊಳಿಸಿರುತ್ತದೆ. ಈ ಸಂದರ್ಭದಲ್ಲಿ “ಸಿಯೋನ್ ರಜತಮಹೋತ್ಸವ ಮತ್ತು ಕರ್ನಾಟಕ ಸುವರ್ಣ ಸಂಭ್ರಮ”ವನ್ನು ಜಂಟಿಯಾಗಿ ಆಚರಿಸಲು ಮಾ.21 ಮತ್ತು ಮಾ.22 ರಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಲೋಕಸಭೆ ಚುನಾವಣೆಯ ಪ್ರಯುಕ್ತ ಚುನಾವಣಾ ಆಯೋಗವು ಕಟ್ಟುನಿಟ್ಟಿನ ನೀತಿಸಂಹಿತೆ ಜಾರಿಗೊಳಿಸಿದೆ. ಆದುದರಿಂದ “ಸಿಯೋನ್ ಬೆಳ್ಳಿಹಬ್ಬ” ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯಾತಿಗಣ್ಯರಿಗೆ ಬರಲು ಅನಾನುಕೂಲವಾಗುವುದರಿಂದ ನಿಗದಿಪಡಿಸಲಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಿಯೋನ್ ಆಶ್ರಮದ ಮಾನೇಜಿಂಗ್ ಟ್ರಸ್ಟಿ ಯುಸಿ ಪೌಲೋಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ಬಾರ್ಯ : ಪೆರಿಯಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
error: Content is protected !!